crime

ಹಣ ಡಬಲ್ ಮಾಡುವ ಆಸೆ ತೋರಿಸಿ 5 ಲಕ್ಷ ರು ದೋಚಿ ದುಷ್ಕರ್ಮಿಗಳು ಎಸ್ಕೇಪ್

5 ಲಕ್ಷ ರೂಪಾಯಿ ಹಣಕೊಟ್ಟರೆ 10 ಲಕ್ಷ ರು ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಆಸೆ ತೋರಿಸಿ 5 ಲಕ್ಷ ರು ಹಣವನ್ನು ದೋಚಿಕೊಂಡು ಎಸ್ಕೇಪ್ ಆದ ಘಟನೆ ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿ ನಡೆದಿದೆ.

ಉಪ್ಪಿನಕೆರೆ ಗೇಟ್ ಬಳಿಯ ಶ್ರೀ ಕಬ್ಬಾಳಮ್ಮ ಟೀ ಸ್ವಾಲ್ ಬಳಿ ಮಂಗಳವಾರ ಬೆಳಿಗ್ಗೆ ಸುಮಾರು 12 ಗಂಟೆ ವೇಳೆಗೆ ಕುಣಿಗಲ್ ಮೂಲದ ಪುನೀತ್, ಕಿರಣ್ ಎಂಬ ಇಬ್ಬರು ವ್ಯಕ್ತಿಗಳು ( KA – 06 – Y – 8557 ) ಹೋಂಡಾ ಯೂನಿಕಾರ್ನ್ ಬೈಕ್ ನಲ್ಲಿ ಬಂದು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದರು ಎನ್ನಲಾಗಿದೆ.

ಸ್ವಲ್ಪ ಸಮಯದ ನಂತರ ಅದೇ ಸ್ಥಳಕ್ಕೆ ಕೋಲಾರ ಮೂಲದ ಇಬ್ಬರು ವ್ಯಕ್ತಿಗಳು ( KA – 01 – 1772 ) ಟೊಯೋಟಾ ಇಟಿಯಾಸ್ ವೈಟ್ ಕಾರ್ ಕಾರಿನಲ್ಲಿ ಬಂದಿದ್ದಾರೆ.

ನಂತರ ಹಣ ವಿನಿಮಯ ಮಾಡಿಕೊಳ್ಳಲು ನಾಲ್ವರು ಕಾರಿನಲ್ಲಿಯೇ ಕುಳಿತು ವ್ಯವಹಾರ ಕುದುರಿಸಲು ಶುರು ಮಾಡಿದ್ದಾರೆ.

ಕಾರಿನಲ್ಲಿ ಕುಳಿತ ನಂತರ ಕುಣಿಗಲ್ ನಿಂದ ಬಂದಿದ್ದ ಪುನೀತ್, ಕಿರಣ್ ಇಬ್ಬರು ವ್ಯಕ್ತಿಗಳಿಂದ 5 ಲಕ್ಷ ರು ಅಸಲಿ ನೋಟುಗಳಿದ್ದ ಬ್ಯಾಗ್ ಅನ್ನು ಅರೋಪಿಗಳು ಪಡೆದುಕೊಂಡು. ಆರೋಪಿಗಳು ತಂದಿದ್ದ ಬ್ಯಾಗ್ ನಲ್ಲಿ ಕೆಳಗೆ ನೋಟ್ ಬುಕ್ ಗಳನ್ನು ತುಂಬಿ ಮೇಲುಗಡೆ ಮಾತ್ರ 100, 200, 500 ರೂಪಾಯಿಯ ಅಸಲಿ ನೋಟುಗಳನ್ನು ಅಂಟಿಸಿ ಇದರಲ್ಲಿ 10 ಲಕ್ಷ ರೂಪಾಯಿ ಹಣವಿದೆ ಹೊರಗಡೆ ಹೋಗಿ ಎಣಿಸಿಕೊಳ್ಳಿ ಎಂದು ಕಾರಿನಿಂದ ಕೆಳಗಿಳಿಸಿ 5 ಲಕ್ಷ ರೂಪಾಯಿ ಅಸಲಿ ಹಣದೊಂದಿಗೆ ಆರೋಪಿಗಳು ಮಳವಳ್ಳಿ ಕಡೆಗೆ ಎಸ್ಕೇಪ್ ಆಗಿದ್ದಾರೆ.

ಕಾರಿನಿಂದ ಕೆಳಗೆ ಇಳಿದು ಹಣ ಎಣಿಸಲು ಮುಂದಾದ ವೇಳೆ ಅಸಲಿ ಸತ್ಯ ಗೊತ್ತಾಗಿದೆ. ಹಣ ಕಳೆದುಕೊಂಡ ವ್ಯಕ್ತಿಗಳು ತಕ್ಷಣವೇ ಮಳವಳ್ಳಿ ಕಡೆಗೆ ಹೋಗುತ್ತಿದ್ದ ಬೇರೊಂದು ಕಾರನ್ನು ಅಡ್ಡಗಟ್ಟಿ ಇಟಿಯಾಸ್ ಕಾರನ್ನು ಕಿರಣ್ ಫಾಲೋ ಮಾಡಿದ್ದಾನೆ. ಆದರೆ ಕಾರು ತುಂಬಾ ವೇಗವಾಗಿ ಹೋದ ಪರಿಣಾಮ ಆರೋಪಿಗಳು ಕ್ಷಣಾರ್ಧದಲ್ಲೇ ಕಣ್ಮರೆಯಾಗಿದ್ದಾರೆ.

ಹಣ ಕಳೆದುಕೊಂಡ ಕಿರಣ್ ಕೆ.ಎಂ.ದೊಡ್ಡಿ ಪೋಲೀಸ್ ಠಾಣೆಗೆ ತೆರಳಿ ನಡೆದ ಘಟನೆ ತಿಳಿಸಿದ್ದಾನೆ.
5 ಲಕ್ಷ ರೂಪಾಯಿ ಹಣದೊಂದಿಗೆ ಪರಾರಿಯಾಗಿರುವ ಆರೋಪಿಗಳಿಗೆ ಮದ್ದೂರು ಪೋಲೀಸರು ಬಲೆ ಬೀಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024