ನಾಲ್ಕು ದಿನದ ಹಿಂದೆ ಐದು ವರ್ಷದ ಹೆಣ್ಣು ಮಗು ಅಪಹರಣ ಆಗಿದೆ ಅಂತ ದೂರು ನೀಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಪಹರಣ ಕ್ಕೆ ಒಳಗಾಗಿದೆ ಎಂಬ ಶಂಕೆಯ ನಡುವೆಯೂ
ಇಂದು ಪಕ್ಕದ ಮನೆಯಲ್ಲಿಯೇ ಮಗುವಿನ ಶವ ಪತ್ತೆಯಾದ ಘಟನೆ ಹುಬ್ಬಳ್ಳಿಯ ಭಾರತ ನಗರದಲ್ಲಿ ಜರುಗಿದೆ.
ಹನುಮಂತಪ್ಪ ಗಾಳಪ್ಪನವರ್ ಪುತ್ರಿ 5 ವರ್ಷದ ಶ್ರೇಯಾ ಶವವಾಗಿ ಪತ್ತೆಯಾದ ಬಾಲಕಿ.
ಪಕ್ಕದ ಮನೆಯ ನೀರಿನ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದೆ. ನಾಲ್ಕು ದಿನದ ಹಿಂದೆಯಷ್ಟೇ ಮಗು ನಾಪತ್ತೆಯಾಗಿತ್ತು. ಆದರೆ ಇಂದು ಶವವಾಗಿ ಪತ್ತೆಯಾಗಿದೆ.
ಹನುಮಂತಪ್ಪ ಗಾಳಪ್ಪನವರ್ ತಮ್ಮದೇ ಇನ್ನೊಂದು ಮನೆಯಲ್ಲಿ ಬಾಡಿಗೆಗೆ ನೀಡಿದ್ದರು. ಇದೀಗ ಅವರ ಮನೆಯಲ್ಲಿ ಶವ ಪತ್ತೆಯಾಗಿದ್ದರಿಂದ ಪೊಲೀಸರು ಬಾಡಿಗೆದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು