April 10, 2025

Newsnap Kannada

The World at your finger tips!

food

ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ ,ಓರ್ವ ವೃದ್ಧೆ ಸಾವು

Spread the love

ಮೈಸೂರು : 50ಕ್ಕೂ ಹೆಚ್ಚು ಜನರು ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದು ,ಓರ್ವ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋ ಘಟನೆ ನಡೆದಿದೆ.

ಮೇ.31ರಂದು ತಾಲೂಕಿನ ಮಾರ್ಬಳ್ಳಿಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು ,ಈ ವೇಳೆಯಲ್ಲಿ ಊಟ ಸೇವಿಸಿದಂತ ಒಂದೇ ಕುಟುಂಬದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದೆ.

ಮೈಸೂರಿನ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು ,ಓರ್ವ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಭವ್ಯ ಭಾರತದ ಭಾಗ್ಯೋದಯ

ಗೃಹ ಪ್ರವೇಶದಲ್ಲಿ 300ಕ್ಕೂ ಹೆಚ್ಚು ಜನರು ಊಟ ಮಾಡಿದ್ದು ,ಮಾರ್ಬಳ್ಳಿ ಬಿಟ್ಟು ಬೇರೆ ಗ್ರಾಮದಿಂದಲೂ ಬಂದು ಊಟ ಮಾಡಿದ್ದರು. ಮಾರ್ಬಳ್ಳಿ ಗ್ರಾಮದಲ್ಲಿ ಊಟ ಮಾಡಿದವರಿಗೆ ಮಾತ್ರವೇ ವಾಂತಿ, ಬೇಧಿ ಕಾಣಿಸಿಕೊಂಡಿದೆ.

Copyright © All rights reserved Newsnap | Newsever by AF themes.
error: Content is protected !!