ಗುಂಡ್ಲುಪೇಟೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ 50 ಸಾವಿರ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಬಲೆಗೆ ಬಿದ್ದಿದ್ದಾರೆ.
ಟಿಎಂಕೆಎಸ್ಐ ಯೋಜನೆಯಡಿ ಹನಿ ಮತ್ತು ತುಂತುರು ನೀರಾವರಿ ಉಪಕರಣ ಅಳವಡಿಕೆಗೆ ತೋಟಗಾರಿಕೆ ಇಲಾಖೆಯಿಂದ ಕಾರ್ಯಾದೇಶ ಹಾಗೂ ಮಂಜೂರಾತಿ ಪಡೆದಿದ್ದ 20 ರೈತರ ಜಮೀನಿಗಳಿಗೆ ಪಟ್ಟಣದ ಮಂಜು ಎಂಟರ್ಪ್ರೈಸಸ್ನಿಂದ ಪಂಪ್ಸೆಟ್ ಉಪಕರಣಗಳನ್ನು ಅಳವಡಿಸಲಾಗಿತ್ತು. ನೀರಾವರಿ ಉಪಕರಣಗಳ ಬಿಲ್ ಪಾವತಿಸಬೇಕಾದರೆ 1 ಲಕ್ಷ ರೂಪಾಯಿ ಲಂಚ ನೀಡಬೇಕು ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಅಂಗಡಿ ಮಾಲೀಕ ಮಂಜುನಾಥ್ ಅವರಲ್ಲಿ ಬೇಡಿಕೆ ಇಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಮಂಜುನಾಥ್ ಎಸಿಬಿಗೆ ದೂರು ನೀಡಿದ ನಂತರ, ಅಧಿಕಾರಿ ಶಿವಲಿಂಗಪ್ಪ ಲಂಚ ಪಡೆಯುವ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಚಾಮರಾಜನಗರ ಡಿವೈಎಸ್ಪಿ ಸದಾನಂದ ಎ.ತಿಪ್ಪಣ್ಣನವರ, ಇನ್ಸ್ಪೆಕ್ಟರ್ಗಳಾದ ಕಿರಣ್ಕುಮಾರ್, ದೀಪಕ್ ಎಲ್ ದಾಳಿ ನಡೆಸಿ ಆರೋಪಿಯವನ್ನು ವಶಕ್ಕೆ ಪಡೆದಿದ್ದಾರೆ.
ಹಣದ ಸಮೇತ ಸಿಕ್ಕ ಅಧಿಕಾರಿ ವಿಚಾರಣೆ ನಡೆದಿದೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು