ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗಾಳಿ ಬೀಸುತ್ತಿದ್ದರೆ, ಮತ್ತೊಂದೆಡೆ ಸಿಡಿ ವಿಚಾರಗಳು ಭಾರಿ ಸುದ್ದಿಯಾಗುತ್ತಿವೆ.
ಸಚಿವ ಮುರುಗೇಶ್ ನಿರಾಣಿ ಮೇಲೆ ಸಾಮಾಜಿ ಕಾರ್ಯಕರ್ತ ಅಲಂ ಪಾಷ ಅವರು 500 ಸಿಡಿಗಳಿವೆ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ನಿನ್ನೆ ರಾತ್ರಿಯೇ ದೆಹಲಿಗೆ ಧಾವಿಸಿ ಹೋಗಿದ್ದಾರೆ. ಅಲ್ಲದೇ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿದ್ದಾರೆ.
ಇಂದು ಉಸ್ತುವಾರಿ ಅರುಣ್ ಸಿಂಗ್ ಭೇಟಿ ಸಾಧ್ಯತೆ ಇದೆ. ಈ ಮೂಲಕ ಸಿಡಿ ಭೀತಿಯಲ್ಲಿ ದೆಹಲಿಗೆ ದೌಡಾಯಿಸಿದರಾ ಶಾಸಕ ಎಂ.ಪಿ ರೇಣುಕಚಾರ್ಯ ಎಂಬ ಪ್ರಶ್ನೆ ಎದುರಾಗಿದೆ.