ನಾನು ನಿನ್ನೆ ಘೋಷಣೆ ಮಾಡಿದ್ದ 2 ಲಕ್ಷ ರೂ.ಗಳೊಂದಿಗೆ ಮತ್ತೆ 4 ಲಕ್ಷ ರೂ. ಸೇರಿಸಿ ಒಟ್ಟು 6 ಲಕ್ಷ ರೂ. ವನ್ನು ಮೃತ ಹರ್ಷ ಕುಟುಂಬಕ್ಕೆ ಕೊಟ್ಟು ಬರುತ್ತೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಅಪ್ರತಿಮ ದೇಶಭಕ್ತನ ಕೊಲೆಯಾಗಿದೆ. ಇನ್ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ರಾಜ್ಯದಲ್ಲಿ ಮತ್ತು ದೇಶದಲ್ಲಿ ನಮ್ಮದೇ ಸರ್ಕಾರವಿದೆ. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕು. ಹರ್ಷನ ಕುಟುಂಬಕ್ಕೆ ನಾನು ವೈಯಕ್ತಕವಾಗಿ 2 ಲಕ್ಷ ರೂ. ಕೊಟ್ಟಿದ್ದೇನೆ ಎಂದರು.
ಆರೋಪಿಗಳನ್ನು ಬಂಧಿಸಿದರೆ ಸಾಲದು ಅವರನ್ನು ಎನ್ಕೌಂಟರ್ ಮಾಡಬೇಕು. ಅವರ ಕುಟುಂಬದ ಕಣ್ಣೀರನ್ನು ನೋಡಲು ಆಗುತ್ತಿಲ್ಲ. ಅವನಿಗೆ ಇಬ್ಬರು ಸಹೋದರಿಯರಿದ್ದಾರೆ. ನಿನ್ನೆ ಘೋಷಣೆ ಮಾಡಿದ್ದ 2 ಲಕ್ಷ ರೂ.ಗಳೊಂದಿಗೆ ಮತ್ತೆ 4 ಲಕ್ಷ ರೂ. ಸೇರಿಸಿ ಒಟ್ಟು 6 ಲಕ್ಷ ರೂ. ಕೊಟ್ಟು ಬರುತ್ತೇನೆ ಎಂದು ತಿಳಿಸಿದ್ದಾರೆ.
ಮೃತ ಹರ್ಷನ ದೇಹದಲ್ಲಿ ನಮ್ಮದೇ ಹಿಂದೂ ರಕ್ತ ಹರಿಯುತ್ತಿತ್ತು. ಎಲ್ಲ ಮುಸ್ಲಿಮರು ಭಯೋತ್ಪಾದಕರಲ್ಲ. ಘಟನೆಗೆ ಸಂಬಂಧಿಸಿದಂತೆ ನಾನು ಮುಸ್ಲಿಮರ ಬಗ್ಗೆ ಮಾತನಾಡುವುದಿಲ್ಲ. ನಮ್ಮ ಮೃದುಧೋರಣೆ ತೋರಿದ್ದೇವೆ. ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು