Main News

ದರ್ಗಾಕ್ಕೆ ತೆರಳಿ ವಾಪಸ್ ಬರುವಾಗ ಅಪಘಾತ – ಒಂದೇ ಕುಟುಂಬದ 6 ಮಂದಿ ದುರ್ಮರಣ

ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 1ವರ್ಷದ ಮಗವೂ ಸೇರಿ ಒಂದೇ ಕುಟುಂಬದ 6 ಮಂದಿ ದುರಂತ ಸಾವು ಕಂಡ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಈ ದುರಂತದಲ್ಲಿ ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ಗುರುವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.

ಮೃತ ದುರ್ದೈವಿಗಳನ್ನು ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್ ಹುಸೇನ್(79), ನೂರ್ ಜಹಾನ್ ಬೇಗಂ(70), ಹೀನಾ ಬೇಗಂ(30), ಇಮ್ರಾನ್(22) ಹಾಗೂ ಉಮೇಜಾ ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದವರು ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ (ಚೌಲ)ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಮಹ್ಮದ್ ಪಾಜೀಲ್ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವಘಡ ನಡೆದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಭಾರೀ ಮಳೆ- ನಾಳೆ ಮಂಡ್ಯ, ಚಾಮರಾಜನಗರ ಜಿಲ್ಲೆಯಲ್ಲಿ ಎರಡು ದಿನ ಶಾಲೆಗಳಿಗೆ ರಜೆ

ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ ವೇದಮೂರ್ತಿ ಹಾಗೂ ಪಿಐ ದೌವಲತ್ ಕುರಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024