ಮಂಗಳೂರಿನಲ್ಲಿ ಬುಧವಾರ ವಿವಿಧ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು .
ದಾಳಿಗೂ ಮುನ್ನ ಅಧಿಕಾರಿಗಳು ಮಾಸ್ಟರ್ ಪ್ಲಾನ್ ಮಾಡಿ ಮಂಗವಾರ ಸಂಜೆ 60 ಕಾರುಗಳನ್ನು ಅಧಿಕಾರಿಗಳು ಬಾಡಿಗೆಗೆ ಪಡೆದಿದ್ದರು.
ಬಾಡಿಗೆ ಪಡೆಯುವ ವೇಳೆ ಕೇರಳಕ್ಕೆ ಹೋಗಬೇಕು. ಇಂಟರ್ ಸ್ಟೇಟ್ ಫುಟ್ಬಾಲ್ ಚಾಂಪಿಯನ್ ಶಿಪ್ ಇದೆ. ಕಾರಿನಲ್ಲಿ ಫುಟ್ಬಾಲ್ ಆಟಗಾರರು ಬರುತ್ತಾರೆ ಅಂತ ಅಧಿಕಾರಿಗಳು ಬಾಡಿಗೆಗೆ ತೆಗೆದುಕೊಂಡಿದ್ದಾರೆ.
ಅಲ್ಲದೆ ನಿನ್ನೆ ಸಂಜೆ ಕಾರುಗಳಿಗೆ ಸಿಬ್ಬಂದಿ ‘ಫುಟ್ಬಾಲ್’ ನ ಸ್ಟಿಕರ್ ಅಂಟಿಸಿದ್ದರು. ಈ ಮೂಲಕ ಆಪರೇಷನ್ ಗೌಪ್ಯವಾಗಿರಿಸಲು ಮಾಸ್ಟರ್ ಪ್ಲಾನ್ ರೂಪಿಸಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.
ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಶಾಕ್ ನೀಡಿರುವ ಅಧಿಕಾರಿಗಳ ದಾಳಿ ವೇಳೆ ಮಾಲೀಕರೊಬ್ಬರ ತಂದೆಯ ಆರೋಗ್ಯದಲ್ಲಿ ಏರುಪೇರು ಆಗಿತ್ತು ಎಂದು ಗೊತ್ತಾಗಿದೆ. ಅಲ್ಲದೆ 5 ಕೋಟಿ ಹಣ ಪತ್ತೆಯಾಗಿದೆ ಎಂದು ತಿಳಿದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು