ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮ ಲೆಕ್ಕಿಗ ಇ-ಸ್ವತ್ತು ಮಾಡಿಕೊಡಲು ಫೋನ್ ಪೇ ಮೂಲಕ ಲಂಚ ಸ್ವೀಕರಿಸಿರುವ ಆರೋಪ ಹೊತ್ತಿದ್ದಾನೆ.
ನಾಗಮಂಗಲ ತಾಲೂಕಿನ ಲಾಳನಕೆರೆ ವೃತ್ತದ ಗ್ರಾಮಲೆಕ್ಕಿಗ ನಿಂಗಪ್ಪ ಸುರಪುರ ವಿರುದ್ಧ ಮಹಿಳೆ ದಾಖಲೆ ಸಮೇತ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಮೀನಾಕ್ಷಿ ಎಂಬ ಮಹಿಳೆಯಿಂದ 66 ಸಾವಿರ ರೂ. ಲಂಚ ಪಡೆದಿರುವ ಆರೋಪವಿದೆ. ಹಣ ಪಡೆದು ವರ್ಷವಾದರೂ ಖಾತೆ ಮಾಡಿಕೊಡಲಿಲ್ಲ.
ಕೊನೆಗೆ ನಾಗಮಂಗಲ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್ಸ್ಟೇಬಲ್ ಅಮಾನತು
ಇತ್ತ ದೂರು ಕೊಡುತ್ತಿದ್ದಂತೆ ಲಂಚಬಾಕ ಗ್ರಾಮ ಲೆಕ್ಕಿಗ ಕಚೇರಿಗೂ ಬರದೇ ಗೈರಾಗುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು