ಮಂಡ್ಯ: ಆನ್ಲೈನ್ ಮೂಲಕ 66 ಸಾವಿರ ರು ಲಂಚ ಪಡೆದರೂ , ಕೆಲಸ ಮಾಡಿಕೊಡದೇ ಸತಾಯಿಸುತ್ತಿರುವ ಗ್ರಾಮ ಲೆಕ್ಕಿಗನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ.
ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮ ಲೆಕ್ಕಿಗ ಇ-ಸ್ವತ್ತು ಮಾಡಿಕೊಡಲು ಫೋನ್ ಪೇ ಮೂಲಕ ಲಂಚ ಸ್ವೀಕರಿಸಿರುವ ಆರೋಪ ಹೊತ್ತಿದ್ದಾನೆ.
ನಾಗಮಂಗಲ ತಾಲೂಕಿನ ಲಾಳನಕೆರೆ ವೃತ್ತದ ಗ್ರಾಮಲೆಕ್ಕಿಗ ನಿಂಗಪ್ಪ ಸುರಪುರ ವಿರುದ್ಧ ಮಹಿಳೆ ದಾಖಲೆ ಸಮೇತ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಮೀನಾಕ್ಷಿ ಎಂಬ ಮಹಿಳೆಯಿಂದ 66 ಸಾವಿರ ರೂ. ಲಂಚ ಪಡೆದಿರುವ ಆರೋಪವಿದೆ. ಹಣ ಪಡೆದು ವರ್ಷವಾದರೂ ಖಾತೆ ಮಾಡಿಕೊಡಲಿಲ್ಲ.
ಕೊನೆಗೆ ನಾಗಮಂಗಲ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಹೆಡ್ ಕಾನ್ಸ್ಟೇಬಲ್ ಅಮಾನತು
ಇತ್ತ ದೂರು ಕೊಡುತ್ತಿದ್ದಂತೆ ಲಂಚಬಾಕ ಗ್ರಾಮ ಲೆಕ್ಕಿಗ ಕಚೇರಿಗೂ ಬರದೇ ಗೈರಾಗುತ್ತಿದ್ದಾರೆ.
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ