ರಾಜ್ಯದಲ್ಲಿ ಕೆಲವು ಜಿಲ್ಲೆ ಹೊರತು ಪಡಿಸಿ ಸೆ. 6ರಿಂದ 6 ರಿಂದ 8 ತರಗತಿಗಳ ಶಾಲೆಗಳು ಆರಂಭವಾಗಲಿವೆ.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಬರುವ ಸೆ. 6ರಿಂದಲೇ 6, 7 ಮತ್ತು 8ನೇ ತರಗತಿ ವರೆಗೂ ಶಾಲೆ ಆರಂಭ ಮಾಡಲು ನಿರ್ಧಾರ ಮಾಡಲಾಗಿದೆ.
ಸಿಎಂ ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಚಿವ ಅಶೋಕ್ , ಸಭೆಯಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ನೀತಿ ನಿಯಮಗಳು ಏನಿರಬೇಕು? ಎಂಬುದರ ಬಗ್ಗೆ ಚರ್ಚೆ ಆಗಿದೆ. ಕೇರಳದಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದೆ. ಕೇರಳದಿಂದ ಬರುತ್ತಿರುವವರಿಗೆ ಕ್ವಾರೆಂಟೈನ್ ಮಾಡಬೇಕು. ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಒಂದು ವಾರದ ಬಳಿಕ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಎಂದು ವಿವರಿಸಿದರು.
ಶಾಲೆಗಳ ಆರಂಭಕ್ಕೆ ಮಾರ್ಗದರ್ಶಿ ಸೂತ್ರಗಳು :
ಗಣೇಶ ಚತುರ್ಥಿಗೂ ಮುನ್ನವೇ ಶಾಲೆಗಳ ಆರಂಭ –
ಕೊರೋನಾ ಪಾಸಿಟಿವ್ ದರ ಶೇ.2 ಕ್ಕಿಂತ ಕಡಿಮೆಯಿರುವ ಸೋಂಕಿನ ಪ್ರಮಾಣದ ತಾಲೂಕಿನಲ್ಲಿ ಶಾಲೆಗಳು ಆರಂಭವಾಗಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು