ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು 5 ಕೋಟಿ ರು ಮೌಲ್ಯದ 6 ಕೆಜಿ ಹಶಿಷ್ ಆಯಿಲ್ ಮತ್ತು 556 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಏಳು ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಆಂಧ್ರಪ್ರದೇಶಕ್ಕೆ ತೆರಳಿದ್ದ ಟೆಂಪೋ ಟ್ರಾವೆಲರ್ಗೆ ಕಲ್ಲು ಎಸೆದು ಪರಾರಿಯಾಗಿರುವ ಇಬ್ಬರು ಅಂತಾರಾಜ್ಯ ಮಾದಕ ದ್ರವ್ಯ ದಂಧೆಕೋರರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಅಡಗುತಾಣದಿಂದ ಹಶಿಷ್ ತೈಲವನ್ನು ವಶಪಡಿಸಿಕೊಂಡಿದ್ದಾರೆ.
ಮುರುಘಾ ಸ್ವಾಮಿ ನ್ಯಾಯಾಂಗ ಬಂಧನ ಸೆ.27ರ ತನಕ ವಿಸ್ತರಣೆ
ಕೆ.ಜಿ.ನಗರ ಮತ್ತು ಜಯನಗರ ಪೊಲೀಸರು ಒಂದು ಆಟೋರಿಕ್ಷಾ ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. 7 ಮಂದಿ ದಂಧೆಕೋರರ ಪೈಕಿ ಐವರನ್ನು ಕೆ.ಜಿ.ನಗರ ಪೊಲೀಸರು ನಂಜಾಂಬ ಅಗ್ರಹಾರ ಬಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಗೋರಿಪಾಳ್ಯದ ನಯಾಜ್ ಪಾಷಾ, ಕೋಟ್ಟಿಗೆಪಾಳ್ಯದ ನೂರ್ ಅಹಮ್ಮದ್, ವಾಲ್ಮೀಕಿನಗರದ ಇಮ್ರಾನ್ ಪಾಷಾ, ಕೆಪಿ ಅಗ್ರಹಾರದ ಕಿರಣ್ ಅಲಿಯಾಸ್ ಬಂಗಾರಪ್ಪ ಹಾಗೂ ದೊಡ್ಡಬಸ್ತಿಯ ಮಹಿಳಾ ಪೆಡ್ಲರ್ ಮುಬಾರಕ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಒಡಿಶಾದಿಂದ ಗಾಂಜಾವನ್ನು ರೈಲಿನಲ್ಲಿ ತಂದು ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕೆಂಗೇರಿಯ ಮನೆಯೊಂದರಲ್ಲಿ ಶೋಧ ನಡೆಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಜಯನಗರ ಪೊಲೀಸರು ಬಂಧಿಸಿರುವ ಇತರ ಇಬ್ಬರು ಪೆಡ್ಲರ್ಗಳನ್ನು ಸಾಗರ್ ಸಾಹೋ ಮತ್ತು ಶೇಷಗಿರಿ ಎಂದು ಗುರುತಿಸಲಾಗಿದೆ.
ಬನಶಂಕರಿಯ ನಯಾಜ್ ಪಾಷಾ ಎಂಬ ಮಾದಕ ವ್ಯಸನಿಯನ್ನು ಪೊಲೀಸರು ಆರಂಭದಲ್ಲಿ ವಿಚಾರಣೆ ನಡೆಸಿದ್ದರು. ಆತನ ಮಾಹಿತಿ ಮೇರೆಗೆ ಪೊಲೀಸರು ಅಂತಾರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲು ಆಂಧ್ರ ಪ್ರದೇಶಕ್ಕೆ ತೆರಳಿದ್ದರು. ನಾಲ್ವರು ಪೆಡ್ಲರ್ಗಳ ಪೈಕಿ ಇಬ್ಬರು ಪರಾರಿಯಾಗಿದ್ದಾರೆ. ಬಂಧಿತ ಇಬ್ಬರಿಂದ ಹಶಿಷ್ ತೈಲವನ್ನು ವಶಪಡಿಸಿಕೊಳ್ಳಲಾಗಿದೆ.
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
This website uses cookies.
Leave a Comment