ಪಾವಗಡ ಪಟ್ಟಣದ ಬಾಬೈಯನ ಗುಡಿ ಬೀದಿಯ ನಿವಾಸಿ ಕರುಣಾಕರ್ ಡೆಂಘಿ ಜ್ವರದಿಂದ ಸಾವನ್ನಪ್ಪಿದ್ದು, ಈ ಘಟನೆ ಸ್ಥಳೀಯರಲ್ಲಿ ಭಯ ಮೂಡಿಸಿದೆ. ಬಾಲಕನ ತಂದೆ ಹರೀಶ್ ಕುಮಾರ್ ಮಗುವನ್ನು ತೀವ್ರ ಜ್ವರದ ಕಾರಣ ಕಳೆದ 8 ದಿನಗಳಿಂದ ಪಾವಗಡದ ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮಗುವಿನ ಸ್ಥಿತಿ ಗಂಭೀರಗೊಂಡು ಮೃತಪಟ್ಟಿದೆ.
ಮಗುವಿಗೆ ಡೆಂಘಿ ಜ್ವರ ಇರುವುದು ಕೊನೆಯ ಕ್ಷಣದವರೆಗೂ ಪೋಷಕರಿಗೆ ವೈದ್ಯರು ತಿಳಿಸಿರಲಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.ಇದನ್ನು ಓದಿ – ಟೋಲ್ ತಪ್ಪಿಸುವ ವಾಹನ ಸವಾರರಿಗೆ ಬಿಗ್ ಶಾಕ್: ಬೆಂ-ಮೈ ಎಕ್ಸ್ಪ್ರೆಸ್ವೇ ಸರ್ವೀಸ್ ರಸ್ತೆ ಬಂದ್
ಈ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣ ಎಂದು ಆಕ್ರೋಶಗೊಂಡ ಪೋಷಕರು, ಸ್ಥಳೀಯರೊಂದಿಗೆ ಸೇರಿ ಖಾಸಗಿ ಕ್ಲಿನಿಕ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಸಂಬಂಧಿತ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು