18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್

Team Newsnap
2 Min Read

ವೈಮಾನಿಕ ನಿಯಂತ್ರಕ ಡಿಜಿಸಿಎ ಸ್ಪೈಸ್ ಜೆಟ್ ವಿಮಾನ ಸಂಸ್ಥೆಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ.

ಸಂಸ್ಥೆಯ ವಿಮಾನಗಳಲ್ಲಿ 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ನೊಟೀಸ್ ನೀಡಲಾಗಿದೆ

ಏರ್ ಕ್ರಾಪ್ಟ್ ನಿಯಮಗಳ ರೂಲ್ 134 ಹಾಗೂ ಷೆಡ್ಯೂಲ್ XI, 1937 ರ ಪ್ರಕಾರ ಸುರಕ್ಷಿತ, ಸಮರ್ಥ ಮತ್ತು ವಿಶ್ವಾಸಾರ್ಹ ವಾಯು ಸೇವೆಗಳನ್ನು ಸ್ಥಾಪಿಸುವುದಕ್ಕೆ ಸ್ಪೈಸ್ ಜೆಟ್ ವಿಫಲವಾಗಿದೆ ಎಂದು ಡಿಜಿಸಿಎ ನೀಡಿರುವ ನೊಟೀಸ್ ನಲ್ಲಿ ಹೇಳಿದೆ. ಇದನ್ನು ಓದಿ – ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ

ಘಟನೆಯ ಪರಿಶೀಲನೆ ಮೂಲಕ ಆಂತರಿಕ ಸುರಕ್ಷತೆ ಕಳಪೆಯಾಗಿರುವುದು ಹಾಗೂ ಅಸಮರ್ಪಕ ನಿರ್ವಹಣೆ ಕ್ರಮಗಳನ್ನು ತೋರುತ್ತಿದೆ ಎಂದು ಡಿಜಿಸಿಎ ಹೇಳಿದೆ.

ನೊಟೀಸ್ ಗೆ ಪ್ರತಿಕ್ರಿಯೆ ನೀಡುವುದಕ್ಕೆ ವಿಮಾನ ಸಂಸ್ಥೆಗೆ ಮೂರು ವಾರಗಳ ಕಾಲಾವಕಾಶ ನೀಡಲಾಗಿದೆ.

ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್‌ಸಿಪಿ ಸಿಂಗ್ ರಾಜೀನಾಮೆ

ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್‌ಸಿಪಿ ಸಿಂಗ್ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ

ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಆರ್‌ಸಿಪಿ ಸಿಂಗ್ ಅವರು ತಮ್ಮ ರಾಜ್ಯಸಭೆಯ ಅವಧಿ ಪೂರ್ಣಗೊಳ್ಳುವ ಒಂದು ದಿನ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ

ಹಿಂದಿನ ದಿನ, ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿ ದೇಶಕ್ಕೆ ನೀಡಿದ ಕೊಡುಗೆಗಾಗಿ ಕ್ಯಾಬಿನೆಟ್ ಸಭೆಯಲ್ಲಿ ನಖ್ವಿ ಮತ್ತು ಸಿಂಗ್ ಇಬ್ಬರನ್ನೂ ಶ್ಲಾಘಿಸಿದರು, ಇದು ಅವರ ಅಂತಿಮ ಕ್ಯಾಬಿನೆಟ್ ಸಭೆಯಾಗಿದೆ

ರಾಜ್ಯಸಭಾ ಸಂಸದರಾಗಿ ತಮ್ಮ ಅವಧಿ ಗುರುವಾರ ಕೊನೆಗೊಳ್ಳಲಿದ್ದು, ಶುಕ್ರವಾರದಿಂದ ಸಂಸದರ ಹುದ್ದೆ ಮುಕ್ತಾಯವಾಗುವ ಕಾರಣ ಸಾಂವಿಧಾನಿಕ ಹೊಣೆಗಾರಿಕೆ ಅರಿತು ಇಬ್ಬರೂ ಸಚಿವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕರಾಗಿರುವ ನಖ್ವಿ ರಾಜ್ಯಸಭೆಯ ಉಪನಾಯಕರೂ ಆಗಿದ್ದಾರೆ. ಸಿಂಗ್ ಅವರು ಜೆಡಿಯು ಕೋಟಾದಿಂದ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು

Share This Article
Leave a comment