Karnataka

ಶಿವಮೊಗ್ಗದಲ್ಲಿ ಪೊಲೀಸ್ ಅಧಿಕಾರಿಯಾದ 8ರ ಬಾಲಕ!

ಶಿವಮೊಗ್ಗ – ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಬುಧವಾರ 1ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಆಜಾನ್ ಖಾನ್ ಒಂದು ಗಂಟೆ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ. SP ಸೇರಿದಂತೆ ಇಲಾಖೆಯ ಅಧಿಕಾರಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.

8 ವರ್ಷದ ಆಜಾನ್ ಖಾನ್, ತಾನು ಪೊಲೀಸ್ ಅಧಿಕಾರಿಯಾಗಬೇಕು ಎಂಬುದು ಬಾಲಕನ ಕನಸು. ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆಜಾನ್ ಗೆ ಒಂದು ಗಂಟೆ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಟ್ಟರು . ಶಿವಮೊಗ್ಗದ ಎಸ್‌ಪಿ ಮಿಥುನ್ ಕುಮಾರ್ ಹೂ ಗುಚ್ಛ ಕೊಟ್ಟು ಬಾಲಕನನ್ನು ಠಾಣೆಗೆ ಸ್ವಾಗತ ಕೋರಿದರು.

ಆಜಾನ್ ಖಾನ್‌ ಮೂಲತಃ ಬಾಳೆಹೊನ್ನೂರುನವನು. ಪ್ರಸ್ತುತ ಶಿವಮೊಗ್ಗ ನಗರದ ಸೂಳೆಬೈಲು ನಿವಾಸಿ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾನೆ. ಬಾಲಕನ ಮತ್ತು ಆತನ ಪೋಷಕರ ಕೋರಿಕೆಯಂತೆ ಆಗಸ್ಟ್ 16ರ ಬುಧವಾರ ಸಂಜೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಬಾಲಕ ಆಜಾನ್ ಖಾನ್ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಲು ಅವಕಾಶ ನೀಡಲಾಯಿತು. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ1402 ಸ್ಪೆಷಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ : ಮಾಹಿತಿ ಇಲ್ಲಿದೆ

8 ವರ್ಷದ ಬಾಲಕ ಆಜಾನ್ ಖಾನ್‌ ಪೊಲೀಸ್ ಸಮವಸ್ತ್ರವನ್ನು ಧರಿಸಿ, ಪೊಲೀಸ್ ನಿರೀಕ್ಷಕರ ಹುದ್ದೆಯನ್ನು ಸಂಕೇತಿಕವಾಗಿ ಅಲಂಕರಿಸಲು ದೊಡ್ಡಪೇಟೆ ಪೊಲೀಸ್ ಠಾಣೆಗೆ ಆಗಮಿಸಿದ. ಶಿವಮೊಗ್ಗದ ಎಸ್‌ಪಿ ಮಿಥುನ್ ಕುಮಾರ್ ಆತನಿಗೆ ಹೂಗುಚ್ಛ ನೀಡಿ ಸ್ವಾಗತ ಕೋರಿದರು.

ಆಜಾನ್ ಖಾನ್‌ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾನೆ. ಆತನ ಹೃದಯ ಸರಿಯಾಗಿ ಬೆಳೆದಿಲ್ಲ. 10 ಲಕ್ಷ ಮಕ್ಕಳಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುವ ಸಮಸ್ಯೆ ಇದಾಗಿದೆ. ಪೊಲೀಸ್ ಅಧಿಕಾರಿಯಾಗಬೇಕು ಎಂಬ ಆತನ ಕನಸನ್ನು ಶಿವಮೊಗ್ಗದ ಪೊಲೀಸರು ಸಾಕಾರಗೊಳಿಸಿದರು.

ಬಾಲಕ ಆಜಾನ್ ಖಾನ್‌ ಗುಣಮುಖವಾಗಲು ಮೂರು ಬಗೆಯ ಆಪರೇಷನ್ ಮಾಡಬೇಕು. ಹೃದಯ ಮತ್ತು ಶ್ವಾಸಕೋಶದ ಕಸಿ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ.

ಆಜಾನ್ ಖಾನ್‌ ಪೋಷಕರ ಬಳಿ ಮಾಹಿತಿ ಪಡೆದ ಎಸ್‌ಪಿ ಮಿಥುನ್ ಕುಮಾರ್ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಒಂದು ಗಂಟೆಗಳ ಕಾಲ ಬಾಲಕ ಪೊಲೀಸ್ ನಿರೀಕ್ಷಕನಾಗಿ ಕೆಲಸ ಮಾಡಲು ಅವಕಾಶ ನೀಡಿದರು. ಬುಧವಾರ ಬಾಲಕ ಪೋಷಕರ ಜೊತೆ ಠಾಣೆಗೆ ಆಗಮಿಸಿದ್ದ. ರಾಜ್ಯದಲ್ಲಿ ಕೊಡಗು ಎಡಿಸಿ ಸೇರಿ 18 ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ‘ಲೋಕಾ’ ದಾಳಿ

ಠಾಣೆಯ ಸಿಬ್ಬಂದಿ ಆಜಾನ್ ಖಾನ್‌ ಸ್ವಾಗತಿಸಿದರು. ಕುರ್ಚಿಯಲ್ಲಿ ಕುಳಿತ ಬಾಲಕನಿಗೆ ಕೆಲಸಗಳು ಹೇಗೆ ನಡೆಯುತ್ತವೆ? ಎಂದು ವಿವರಣೆ ನೀಡಿದರು. ತನ್ನ ಆಸೆಯಂತೆ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ ಬಾಲಕ ಸಹ ಸಂತಸ ವ್ಯಕ್ತಪಡಿಸಿದ, ಪೊಲೀಸರಿಗೆ ಪೋಷಕರು ಧನ್ಯವಾದಗಳನ್ನು ತಿಳಿಸಿದರು.

ಶಿವಮೊಗ್ಗದಲ್ಲಿ ಪೊಲೀಸ್ ಅಧಿಕಾರಿಯಾದ 8ರ ಬಾಲಕ! – An 8-year-old boy became a police officer in Shimoga! police #shivamogga #mandya #psi

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024