ಮಂಡ್ಯ: ಜೂನ್ 3ನೇ ವಾರ ಬಂದರೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ಮಳೆಯಾಗಿಲ್ಲ. ಇದರ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂನ ನೀರಿನ ಮಟ್ಟ 80 ಅಡಿಗೆ ಕುಸಿದಿದೆ.
ಮುಂದಿನ ದಿನಗಳಲ್ಲಿ ಮಳೆಯಾಗದೇ ಇದ್ದರೆ ಕಾವೇರಿ ನೀರನ್ನು ಅವಲಂಬಿಸಿರುವ ಜನರು ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ.
ಈಗಾಗಲೇ ಡ್ಯಾಂನ ಗೇಟ್ನ ಬಳಿ ನೀರಿಲ್ಲ. ಇಂತಹ ಪರಿಸ್ಥಿತಿ ಬಂದರೆ ಇರುವ ನೀರನ್ನು ಬಳಕೆ ಮಾಡಿಕೊಳ್ಳಲು, ಮುನ್ನೆಚ್ಚರಿಕೆಯಾಗಿ ಡ್ಯಾಂ ನಿರ್ಮಾಣದ ವೇಳೆಯೇ ಮಾಡಿರುವ ಒಳಭಾಗದ ನಾಲೆಯಿಂದ ಈಗ ಕುಡಿಯಲು ನೀರು ಬಿಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆಯಾಗದೇ ಇದ್ದರೆ ಈ ನಾಲೆಯಿಂದಲೂ ನೀರು ಬಿಡಲು ಸಾಧ್ಯವಿಲ್ಲ.
ಈಗ ಡ್ಯಾಂನಲ್ಲಿ 10.811 ಟಿಎಂಸಿ ನೀರಿದೆ. ಈ ಪೈಕಿ 3.811 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಬಹುದು. ಉಳಿದ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಇದನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಬರುವ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಭಾಗದ ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ.ಡಾ. ಕುಮಾರ ನೂತನ ಡಿಸಿಯಾಗಿ ಅಧಿಕಾರ ಸ್ವೀಕಾರ
- ಕೆಆರ್ಎಸ್ ಇಂದಿನ ನೀರಿನ ಮಟ್ಟ
- ಗರಿಷ್ಠ ಮಟ್ಟ – 124.80 ಅಡಿಗಳು
- ಇಂದಿನ ಮಟ್ಟ – 80.06 ಅಡಿಗಳು
- ಗರಿಷ್ಠ ಸಾಂದ್ರತೆ – 49.452 ಟಿಎಂಸಿ
- ಇಂದಿನ ಸಾಂದ್ರತೆ -10.811 ಟಿಎಂಸಿ
- ಒಳ ಹರಿವು – 289 ಕ್ಯೂಸೆಕ್
- ಹೊರ ಹರಿವು – 3,109
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ