Main News

ಕಣ್ವ ಗ್ರೂಪ್​​ಗೆ ಸೇರಿದ 84.40 ಕೋಟಿ ರು ಮೌಲ್ಯದ ಆಸ್ತಿ ಮುಟ್ಟುಗೋಲು

ಹೆಚ್ಚಿನ ಬಡ್ಡಿ ದರ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಣ್ವ ಗ್ರೂಪ್​​ಗೆ ಸೇರಿದ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿನ ಸುಮಾರು 84.40 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಕಣ್ವ ಸಮೂಹ ಸಂಸ್ಥೆಗಳ‌ ನಿರ್ದೇಶಕ ಹಾಗೂ ಕುಟುಂಬ ಸದಸ್ಯರಿಗೆ ಸೇರಿದ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶನ ಕೃಷಿ-ಕೃಷಿಯೇತರ ಭೂಮಿ, ಕಟ್ಟಡಗಳು ಹಾಗೂ ರಾಜ್ಯದ ಬೆಂಗಳೂರು, ನೆಲಮಂಗಲ, ಚಿಕ್ಕಬಳ್ಳಾಪುರ, ಶ್ರೀರಂಗಪಟ್ಟಣ ಸೇರಿ ಹಲವೆಡಿ ಇರುವ ಆಸ್ತಿಯನ್ನು ಪಿಎಂಎಲ್​ಎ ಆ್ಯಕ್ಟ್ 2002ರ ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಇದಕ್ಕೂ ಮೊದಲು 255.17 ಕೋಟಿ ಮೌಲ್ಯದ ಚರ, ಸ್ಥಿರ ಆಸ್ತಿಯನ್ನು ಇಡಿ ವಶಪಡಿಸಿಕೊಂಡಿತ್ತು.‌

ಈವರೆಗೂ ಕಣ್ವ ಸಮೂಹ ಸಂಸ್ಥೆಗಳ ಒಟ್ಟು 339.57 ಕೋಟಿ ಮೌಲ್ಯದ ಆಸ್ತಿ ಅಟ್ಯಾಚ್ ಆಗಿದೆ.

ಪ್ರಕರಣ ವಿವರ
ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಲಿಮಿಟೆಡ್ ಬ್ಯಾಂಕ್ ಹೆಸರಲ್ಲಿ ಹೆಚ್ಚಿನ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿದ ಆರೋಪ ಕೇಳಿಬಂದಿತ್ತು.

ಶೇ 12-15ರಷ್ಟು ಬಡ್ಡಿ ಹಾಗೂ ಸಾಲ ಸೌಲಭ್ಯ ಕಲ್ಪಿಸುವುದಾಗಿ ಸುಮಾರು 13 ಸಾವಿರ ಜನರಿಂದ 650 ಕೋಟಿ ರೂಪಾಯಿ ಹಣ ಸಂಗ್ರಣ ಮಾಡಲಾಗಿತ್ತು. ಹಣ ಸಂಗ್ರಹಣೆಗೆ ಏಜೆಂಟ್​​ರನ್ನು ನೇಮಕ ಮಾಡಿ ಅಧಿಕ ಬಡ್ಡಿಯ ಆಸೆ ತೋರಿಸಿ ಹಣ ಸಂಗ್ರಹಿಸಲಾಗಿತ್ತು.

ಸಹಕಾರ ಬ್ಯಾಂಕ್​​ಗಳು ಕಾನೂನು ಕಾಯ್ದೆಗಳ ಉಲ್ಲಂಘನೆ ಹಿನ್ನೆಲೆ ಕಣ್ವ ಸಮೂಹ ಸಂಸ್ಥೆಗಳ ನಿರ್ದೇಶಕ ಎನ್.ನಂಜುಂಡಯ್ಯ ವಿರುದ್ಧ ಬೆಂಗಳೂರು ಸಹಕಾರಿ ಸಂಘಗಳ ನೋಂದಣಾಧಿಕಾರಿ, ಜಾರಿ ನಿರ್ದೇಶನಾಲಯ(ಇ.ಡಿ)ಗೆ ದೂರು ನೀಡಿದ್ದರು.

ಈ ಹಿನ್ನೆಲ್ಲೆ ಕಣ್ವ ಸಮೂಹ ಸಂಸ್ಥೆಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಆಧಾರದ ಮೇಲೆ 2020 ಅಗಸ್ಟ್ 25ರಂದು ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಮಹತ್ವದ ದಾಖಲೆಯನ್ನು ವಶಕ್ಕೆ ಪಡೆದು ಕೊಂಡಿದ್ದರು.

Team Newsnap
Leave a Comment
Share
Published by
Team Newsnap

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024