ಮಂಡ್ಯ ರೈತರ ಜೀವನಾಡಿ ಕೆಆರ್ಎಸ್ ಜಲಾಶಯ 90 ವರ್ಷಗಳ ಇತಿಹಾಸದಲ್ಲೇ ಸಾಧನೆ ಮಾಡಿದೆ.
ನಿರಂತರವಾಗಿ 53 ದಿನಗಳ ಕಾಲ ಸಂಪೂರ್ಣ ತುಂಬಿ ಹರಿಯುವ ಮೂಲಕ ಕೆಆರ್ಎಸ್ ದಾಖಲೆ ನಿರ್ಮಿಸಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯ ತುಂಬಿ ಹರಿಯುತ್ತಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಕಾವೇರಿ ಉಕ್ಕಿ ಹರಿದಿದ್ದಾಳೆ.
ಸತತವಾಗಿ 53 ದಿನಗಳ ಕಾಲ ಸಂಪೂರ್ಣವಾಗಿ ತುಂಬಿ ಹರಿದ ಇತಿಹಾಸ ಮರುಕಳಿಸಿರಲಿಲ್ಲ. 90 ವರ್ಷಗಳ ದಾಖಲೆಯನ್ನು ಕೆಆರ್ಎಸ್ ಈ ವರ್ಷ ಸರಿಗಟ್ಟಿದೆ.
ಅಕ್ಟೋಬರ್ 29ರಿಂದ ಡಿಸೆಂಬರ್ 23ರ ತನಕ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿತ್ತು.
53 ದಿನಗಳ ವರೆಗೆ 124.80 ಅಡಿ ಎಂದರೆ ಗರಿಷ್ಠ ಮಟ್ಟ ಇತ್ತು. ಈ ದಾಖಲೆಯಿಂದ ಬೇಸಿಗೆ ಸಮಯದಲ್ಲಿ ಜಿಲ್ಲೆಯ ಹಾಗೂ ಕಾವೇರಿಯನ್ನು ಅವಲಂಬಿಸಿರುವ ಜನರು ಚಿಂತಿಸುವ ಅಗತ್ಯ ಇಲ್ಲ ಎಂದು ರೈತರು ಖುಷಿಯಾಗಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ