ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿಯ ನಿನ್ನೆ ಜಿಲ್ಲಾಧಿಕಾರಿಗಳು ವಾಸ್ತವ ಹೂಡಿದ್ದ ಕುಮಟೂರು ಗ್ರಾಮದಲ್ಲಿ ಹುಲಿ ದಾಳಿಗೆ 14 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ದಕ್ಷಿಣ ಕೊಡಗಿನಾದ್ಯಂತ ನಿರಂತರವಾಗಿ ಜಾನುವಾರುಗಳನ್ನು ಬಲಿ ಪಡೆಯುತ್ತಿದ್ದ ಹುಲಿ, ಇದೀಗ ನರಬಲಿ ಪಡೆದು ಕೊಂಡಂತಾಗಿದೆ.
ಕುಮಟೂರಿನ ಕೋಟ್ರಾಂಗಡ ಬಿದ್ದಪ್ಪ ತೋಟ ಕಾರ್ಮಿಕರಾಗಿರುವ ಪಣಿ ಎರವರ ಬಸವ ಅವರ ಪುತ್ರ ಅಯ್ಯಪ್ಪ ಎಂಬ ಬಾಲಕನೇ ಹುಲಿ ದಾಳಿಗೆ ಬಲಿಯಾಗಿದ್ದಾನೆ
ಶ್ರೀಮಂಗಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿರುವ ಅಯ್ಯಪ್ಪ, ಕೋಟ್ರಾಂಗಡ ಅಶ್ವತ್ ಎಂಬವರ ಕಾಫಿ ತೋಟದಲ್ಲಿ ಸೌದೆಗಾಗಿ ತೆರಳಿದ ಸಂದರ್ಭದಲ್ಲಿ ಸಂಜೆ ತೋಟದಲ್ಲಿ ಎದುರಾದ ಹುಲಿವೊಂದು ಬಾಲಕನ ಮೇಲೆರಗಿ ದಾಳಿ ನಡೆಸಿ, ಸ್ಥಳದಲ್ಲೇ ಕೊಂದು ಹಾಕಿರುವ ಎಲ್ಲಾ ಕುರುಹುಗಳು ಲಭ್ಯವಾಗಿದೆ.
ಹುಲಿ ದಾಳಿಯಿಂದಾಗಿ ಬಾಲಕನ ಮೆದುಳು ಹೊರಬಂದು ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಸ್ಥಿತಿಯಲ್ಲಿದೆ.
ಇದೇ ಗ್ರಾಮದಲ್ಲಿ ಜಿಲ್ಲಾಧಿಕಾರಿ ಶನಿವಾರ ಗ್ರಾಮ ವಾಸ್ತವ್ಯ ಹೂಡಿದ್ದ ವೇಳೆಯಲ್ಲಿ ಸ್ಥಳೀಯರು ಹುಲಿ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರು.
ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆ ಹಿಡಿಯುವ ಭರವಸೆ ನೀಡಿದ್ದರು. ಆದರೆ, ಶನಿವಾರ ಸಂಜೆಯೇ ಹುಲಿ ಬಾಲಕನನ್ನು ಬಲಿ ಪಡೆದುಕೊಂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು