ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಬಳಿ ನಡೆದಿರುವ ಗಣಿಸ್ಫೋಟ ದುರಂತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್, ಅಧಿಕಾರಿಗಳ ತಂಡದೊಂದಿಗೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆ ಕುರಿತಂತೆ ಮಾಹಿತಿ ಕಲೆ ಹಾಕಿದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿ ಸಚಿವರು, ಫೆ 7 ರಂದು ಬ್ರಹ್ಮವರ್ಷಿಣಿ ಕ್ರಶರ್ ಲೀಗಲ್ ಆಗಿದ್ದರೂ 7 ಅಡಿಯಲ್ಲಿ ಇಡಬೇಕಾದ ಸ್ಫೋಟಕಗಳನ್ನು 15 ಅಡಿ ಅಳಕ್ಕೆ ಇಟ್ಟಿದ್ದ ಕಾರಣದಿಂದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು ಎಂದರು.
ಸ್ಫೋಟಕಗಳನ್ನು ಇದೇ ರೀತಿ ಸ್ಫೋಟಿಸಬೇಕು ಎಂಬ ನಿಯಮಗಳಿವೆ. ಅದ್ದರಿಂದಲೇ ಕಳೆದ ಫೆ. 7 ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಫ್ಐಆರ್ ಕೂಡ ದಾಖಲು ಮಾಡಿದ್ದಾರೆಂದು ತಿಳಿಸಿದರು.
ಕ್ವಾರಿಯನ್ನು ಅಂದೇ ಬಂದ್ ಮಾಡಿದ್ದರು. ಇಲ್ಲಿ ನಿರಂತರವಾಗಿ ಪೊಲೀಸರು ಪರಿಶೀಲನೆ ನಡೆಸಿದ್ದ ಕಾರಣ ಕ್ವಾರಿ ಮಾಲೀಕರು ಅಕ್ರಮವಾಗಿ ಸಂಗ್ರಹ ಮಾಡಿದ್ದ ಜಿಲೆಟಿನ್ಗಳನ್ನು ನಾಶಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದರು ಎಂದು ಸುಧಾಕರ್ ಹೇಳಿದರು.
6 ಮಂದಿ ಸಾವು
ಮಾಲೀಕರ ಸೂಚನೆ ಮೇರೆಗೆ ತಡರಾತ್ರಿ ಇವುಗಳ ಬಗ್ಗೆ ಏನೂ ತಿಳಿಯದ ರೀತಿಯಲ್ಲಿ ನಾಶಪಡಿಸಲು ಯತ್ನಿಸಿದ ವೇಳೆ 6 ಮಂದಿ ಸಿಬ್ಬಂದಿಗಳು ಬಲಿಯಾಗಿದ್ದಾರೆ. ಅಕ್ರಮವಾಗಿ ಜಿಲೆಟಿನ್ ಸಂಗ್ರಹಿಸುವುದು ಖಂಡನೀಯ. ಆಂಧ್ರ ಮೂಲದ ಇಬ್ಬರು, ನೇಪಾಳದ ಒಬ್ಬರು ಸಾವನ್ನಪ್ಪಿದ್ದಾರೆ, ಮೃತರ ಕುಟುಂಬಸ್ಥರು ದುಃಖ ಹೇಗೆ ಭರಿಸುತ್ತಾರೋ ಗೊತ್ತಿಲ್ಲ. ಶೀಘ್ರದಲ್ಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಯಾರೇ ಆಗಿದ್ದರೂ ಉಗ್ರವಾದ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೇ ಅಕ್ರಮ ಸ್ಫೋಟಕ ಸರಬರಾಜು ಮಾಡಿದವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ರು.
ಕಳೆದ ಒಂದು ತಿಂಗಳಿನಿಂದ ನಾನು ಎರಡು ಬಾರಿ ಹೇಳಿದ ಮೇಲೆ ನಮ್ಮ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುವ ಒಂದು ಕ್ವಾರಿ ಇಲ್ಲ. ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಗಣಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವರು ತಿಳಿಸಿದರು.
ಒಬ್ಬನ ಬಂಧನ : ಮಾಲೀಕರ ಹುಡುಕಾಟ :
ಅಕ್ರಮ ಸ್ಫೋಟಕ ಸಂಗ್ರಹ ಮಾಡಿದರೂ ಅಧಿಕಾರಿಗಳು ಏಕೆ ಕ್ರಮಕೈಗೊಂಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕ್ವಾರಿ ನಡೆಸಬೇಕಾದರೆ ಸ್ಫೋಟಕ ಅಗತ್ಯ. ಅಭಿವೃದ್ಧಿ ಕಾರ್ಯಗಳಿಗೆ ಕ್ವಾರಿ ಎಂಬುವುದು ಒಂದು ಭಾಗ, ಆದರೆ ಇವುಗಳನ್ನು ನಿಯಮಗಳ ಅನುಸಾರ ನಡೆಸಬೇಕಾಗಿದೆ. ನಿಯಮಗಳ ಅನುಸಾರ ನಡೆಯದಿದ್ದರೆ ಇಂತಹ ದುರಂತಗಳು ನಡೆಯುತ್ತವೆ. ಈಗಾಗಲೇ ಪ್ರಕರಣ ಸಂಬಂಧ ಒಬ್ಬರನ್ನು ಬಂಧಿಸಲಾಗಿದೆ, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ತಲೆಮರೆತಿಸಿಕೊಂಡವರನ್ನು ಪತ್ತೆ ಮಾಡಲು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ವಿವರಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು