ತಮ್ಮ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎಚ್ ಡಿ ಕೋಟೆ ತಾಲೂಕಿನ ಎಲೆಹುಂಡಿ ಗ್ರಾಮದಲ್ಲಿ ನಡೆದಿದೆ.
ಸಹೋದರರಾದ ವೆಂಕಟೇಶ್ (28), ಹರೀಶ್ (25) ಪ್ರತ್ಯೇಕ ಸ್ಥಳಗಳಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ.
ಟ್ಯಾಕ್ಟರ್ ಅನ್ನು ರಸ್ತೆಯಲ್ಲಿ ಸರಿಯಾಗಿ ಓಡಿಸಿಕೊಂಡು ಬರುವಂತೆ ಹರೀಶ್ಗೆ ತಂದೆ ಬುಧವಾರ ರಾತ್ರಿ ಬುದ್ಧಿವಾದ ಹೇಳಿದ್ದಾರೆ. ತಂದೆಯ ಮಾತುಗಳಿಂದ ಮನನೊಂದ ಹರೀಶ್ ಗುರುವಾರ ಬೆಳಿಗ್ಗೆ ಎಲೆಹುಂಡಿ ಸಮೀಪದ ಕೆರೆ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ.
ಈ ವಿಚಾರವನ್ನು ಮೈಸೂರಿಗೆ ಹೋಗಿದ್ದ ವೆಂಕಟೇಶ್ಗೆ ಸ್ನೇಹಿತರು ತಿಳಿಸಿದ್ದಾರೆ. ಅಣ್ಣ-ತಮ್ಮಂದಿರ ನಡುವೆ ಹೊಂದಾಣಿಕೆ ಮತ್ತು ಪ್ರೀತಿ ಹೆಚ್ಚಾಗಿದ್ದರಿಂದ ವೆಂಕಟೇಶ್, ಮನೆಗೆ ಬರದೆ ತನ್ನ ಕಾರಿನಲ್ಲಿ ಸರಗೂರು ಕಡೆಗೆ ಹೋಗಿ ನಾಲೆಯ ಸಮೀಪ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ