ನನ್ನ ಬಳಿ ಇನ್ನೂ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದಿನೇಶ್, ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ ಎಂದರು.
ನಾನು ಕಾನೂನು ತಜ್ಞರ ಜೊತೆಗೆ ಮಾತನಾಡಿ ಅವರ ಹೆಸರನ್ನು ಬಹಿರಂಗ ಪಡಿಸುತ್ತೇನೆ. ಯಾವ ಪಕ್ಷ, ಯಾರು, ಅವರ ಹೆಸರು ಎಲ್ಲಾ ವಿಚಾರವನ್ನು ನಾನು ಹೇಳುತ್ತೇನೆ. ಸರ್ಕಾರದ ಉನ್ನತ ಹುದ್ದೆಯಲ್ಲಿ ಇರುವವರು ಇದ್ದಾರೆ. ಅವರ ಸಿಡಿಗಳು ಇದೆ ಎನ್ನುವುದನ್ನು ಮಾತ್ರ ನಾನು ಹೇಳಬಹುದು ಎಂದು ಹೇಳಿದರು.
ಯಾರು ಎಂಬುದನ್ನು ನಾನು ಹೇಳುತ್ತೇನೆ. ಸತ್ಯಾ ಸತ್ಯಾಸತೆಯನ್ನು ಪರಿಶಿಲನೆಯಾಗಬೇಕು. ತನಿಖೆಯಾಗಬೇಕು. ಸಂತ್ರಸ್ತೆಗೆ ನ್ಯಾಯ ಸಿಗಬೇಕು. ರಮೇಶ್ ಜಾರಕಿಹೊಳಿಯಿಂದ ಲೈಂಗಿಕ ಶೋಷಣೆ ಒಳಗಾದ ಯುವತಿಗೆ ಜೀವ ಬೆದರಿಕೆ ಇರುವ ಕಾರಣಕ್ಕಾಗಿ ಅವರು ಹೊರಗೆ ಬರುತ್ತಿಲ್ಲ ಎಂದು ಹೇಳಿದರು.