ತಮ್ಮ ವಿರುದ್ದ ಸುದ್ದಿ ಪ್ರಸಾರಕ್ಕೆ ತಡೆ- 6 ಸಚಿವರಿಗೆ ಮಾಚ್೯ 30 ರವರೆಗೆ ನೆಮ್ಮದಿ

Team Newsnap
1 Min Read

ತಮ್ಮ ವಿರುದ್ಧದ ಯಾವುದೇ ಸುದ್ದಿ ಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ 6 ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ.

ಮಾರ್ಚ್ 30ರವರೆಗೆ ಮಾನಹಾನಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆಯ ನಂತರ ಇನ್ನೂ ಹಲವು ಸಚಿವರ ಸಿಡಿ ಬಿಡುಗಡೆಯಾಗಲಿದೆ ಎಂದೇ ಹೇಳಲಾಗುತ್ತಿತ್ತು. ಇದೇ ಸಂದರ್ಭದಲ್ಲಿ ತಮ್ಮ ತೇಜೋವಧೆಗಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂಬುದಾಗಿ ಆರೋಪಿಸಿದಂತ ಆರು ಸಚಿವರು, ತಮ್ಮ ವಿರುದ್ಧದ ಯಾವುದೇ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ಕುರಿತಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನ ಸಿಸಿಹೆಚ್-20ರ ನ್ಯಾಯಾಧೀಶ ಬಿ.ಎಸ್.ವಿಜಯ ಕುಮಾರ್ ನ್ಯಾಯಪೀಠವು, ಅರ್ಜಿಯನ್ನು ಪುರಸ್ಕರಿಸಿ ರಾಜ್ಯದ ಎಲ್ಲಾ ಮಾಧ್ಯಮಗಳಿಗೆ 6 ಸಚಿವರ ಯಾವುದೇ ಮಾನಹಾನಿ ವರದಿಯನ್ನು ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿ, ತುರ್ತು ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ಅರ್ಜಿಯ ವಿಚಾರಣೆ ಮಾರ್ಚ್ 30ಕ್ಕೆ ಮುಂದೂಡಿಕೆ ಮಾಡಿದ್ದಾರೆ.

Share This Article
Leave a comment