ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿರುವ ಘಟನೆ ಮಂಗಳೂರಿನ ಉಲ್ಲಾಳ ಸಮೀಪದ ಕುಂಪಲದಲ್ಲಿ ನಡೆದಿದೆ.
ಕುಂಪಲ ಆಶ್ರಯಕಾಲನಿಯ ಚಿತ್ತಪ್ರಸಾದ್ ಅವರ ಪುತ್ರಿ ಪ್ರೇಕ್ಷಾ(17)
ಸಾವನ್ನಪ್ಪಿದ್ದಾರೆ.
ಮಂಗಳೂರು ನಂತೂರು ಬಳಿಯ ನಿಟ್ಟೆ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿ ಪ್ರೇಕ್ಷಾ ಇಂದು ರಜೆ ಪಡೆದುಕೊಂಡು ಮನೆಯಲ್ಲೇ ಇದ್ದರು.
ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಮನೆಗೆ ಮೂವರು ಬಂದು ಹೋಗಿದ್ದರು ಎನ್ನಲಾಗಿದೆ .ಮಧ್ಯಾಹ್ನ ವೇಳೆ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಕೋಣೆಯೊಳಗೆ ಪ್ರೇಕ್ಷಾಲ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮನೆಗೆ ಬಂದ ಮೂವರು ಯಾರು ?:
ಪ್ರೇಕ್ಷಾ ಮಾಡ್ಲಿಂಗ್ ನಲ್ಲಿ ಆಸಕ್ತಿ ಹೊಂದಿದ್ದು ಇಂದು ಫೋಟೋ ಶೂಟ್ ಗಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದಳು. ಆ ಕಾರಣಕ್ಕಾಗಿಯೇ ಕಾಲೇಜಿಗೆ ರಜೆ ಪಡೆದುಕೊಂಡಿದ್ದಳು. ಆದರೆ ಆಕೆಯ ಶವ ಪತ್ತೆಯಾಗಿರುವುದರಿಂದ ಮನೆಗೆ ಬಂದಿದ್ದ ಮೂವರ ಮೇಲೆ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ಕೊಲೆ ಎಂದು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ