ಕೇಂದ್ರದ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ತಾಯಿ ಸೋಮವ್ವ ಅಂಗಡಿ(92) ಗುರುವಾರ ಬೆಳಗ್ಗೆ ಕೊಪ್ಪ (ನಾಗೇರಹಾಳ) ಗ್ರಾಮದ ಸ್ವಗೃಹದಲ್ಲಿ ನಿಧನರಾದರು.
ಬೆಳಗಾವಿ ತಾಲೂಕಿನ ನಾಗೇರಹಾಳ ಗ್ರಾಮದವರಾದ ಸೋಮವ್ವ ಅಂಗಡಿ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಸುರೇಶ ಅಂಗಡಿ ಅವರ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದ ಸೋಮವ್ವ ಮಗನ ಅಕಾಲಿಕ ನಿಧನದಿಂದ ಮಾನಸಿಕವಾಗಿ ಕುಗ್ಗಿದ್ದರು.
ಮೃತರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ಕೆ.ಕೆ ಕೊಪ್ಪ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.