ರಾಸಲೀಲೆ ಪ್ರಕರಣದ ತನಿಖೆಯಲ್ಲಿ ಕ್ಷಣ ಕ್ಷಣಕ್ಕೂ ಹೊಸ ತಿರುವು ಹಾಗೂ ಮಾಹಿತಿಗಳನ್ನು ಎಸ್ ಐಟಿ ತಂಡ ಕಲೆ ಹಾಕುತ್ತಿದೆ.
ಎಸ್ಐಟಿ ಅಧಿಕಾರಿಗಳಿಗೆ ಈ ವೇಳೆ ಅಚ್ಚರಿಯ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ಸಿಡಿ ಇಟ್ಟುಕೊಂಡು ಬೆದರಿಕೆ ಹಾಕಿ ಲಕ್ಷ, ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ವಿಜಯಪುರದಲ್ಲಿ ಸಿಡಿ ಅಪ್ ಲೋಡ್ ಮಾಡಿದ ವ್ಯಕ್ತಿಯು ಬರೋಬ್ಬರಿ 45 ಲಕ್ಷ ರುಗಳ ಫಾರ್ಚೂನರ್ ಕಾರು ಖರೀದಿಗೆ ಈ ಸಿಡಿಕೋರ ಯತ್ನಿಸಿದ್ದನು. ಈ ಸಿಡಿಕೋರನಿಗೆ ಆ ವ್ಯಕ್ತಿ 45 ಲಕ್ಷ ರು ನಗದು ನೀಡಿದ್ದ.
ಇದೇ ಹಣದಲ್ಲಿ ವ್ಯಕ್ತಿ ಫಾರ್ಚೂನರ್ ಕಾರು ಖರೀದಿಗೆ ಯತ್ನಿಸಿದ್ದ, ಆದರೆ ನಗದು ವ್ಯವಹಾರ ಮಾಡುವುದಿಲ್ಲ ಎಂದು ಶೋ ರೂಂ ಸಿಬ್ಬಂದಿ ಹೇಳಿದ್ದಕ್ಕೆ ಕಾರ್ ಖರೀದಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ.
ಮಾಜಿ ಸಚಿವರ ಸಿಡಿ ತಂದುಕೊಟ್ಟವರಿಗೆ ಲಕ್ಷ ಲಕ್ಷ ರೂಪಾಯಿ ದುಡ್ಡು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ, ಸಿಡಿ ತೆಗೆದುಕೊಂಡು ಹೋಗಿ ಕೊಟ್ಟ ಐದಾರು ಮಂದಿಗೆ ಲಕ್ಷಗಟ್ಟಲೇ ಹಣ ಸಂದಾಯವಾಗಿದೆ.
ಆದರೆ ಈ ಹಣ ಕೊಟ್ಟಿದ್ದು ಯಾರು? ಆ ಹಣದ ಮೂಲ ಎಲ್ಲಿಯದು ಎಂಬುದನ್ನು ಸಹ ಎಸ್ಐಟಿ ಮಾಹಿತಿ ಕಲೆ ಹಾಕುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ