ನೇರಳೆ ಮಾರ್ಗದಲ್ಲಿ ಕಾಮಗಾರಿ ನಡೆಯಲಿರುವ ಕಾರಣ 8 ದಿನಗಳ ಕಾಲ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಮೆಜೆಸ್ಟಿಕ್ ಹಾಗೂ ಮೈಸೂರು ರಸ್ತೆ ನಡುವೆ ಮಾರ್ಚ್ 21 ರಿಂದ 28ರವರೆಗೆ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು.
ಈ ಕುರಿತು ನಮ್ಮ ಮೆಟ್ರೋ ತನ್ನ ಹೇಳಿಕೆ ಬಿಡುಗಡೆ ಮಾಡಿ, ಮೈಸೂರು ರಸ್ತೆಯಿಂದ ಕೆಂಗೇರಿಯವರೆಗಿನ ಪೂರ್ವ ಪಶ್ಚಿಮ ವಿಸ್ತರಿಸಿದ ನೇರಳೆ ಮಾರ್ಗ ಪೂರ್ವ ನಿಯೋಜನೆಗೆ ಸಂಬಂಧಿಸಿದಂತೆ ಮಾಗಡಿ ರಸ್ತೆಯಿಂದ ಮೈಸೂರು ರಸ್ತೆಯಲ್ಲಿ ಸಿಗ್ನಲಿಂಗ್ ವ್ಯವಸ್ಥೆಗೆ ಮಾರ್ಪಾಡು ಕಾಮಗಾರಿಗಳನ್ನು ಕೈಗೊಳ್ಳಬೇಕಿದೆ.
ಕೆಂಪೇಗೌಡ ನಿಲ್ದಾಣ ಮತ್ತು ಮೈಸೂರು ರಸ್ತೆ ನಡುವೆ ಮೆಟ್ರೋ ರೈಲು ಸೇವೆಗಳನ್ನು ಮಾರ್ಚ್ 21 ರಿಂದ ಮಾರ್ಚ್ 28ರವರೆಗೆ ಸ್ಥಗಿತಗೊಳಿಸಲಾಗುವುದು.
ನೇರಳೆ ಮಾರ್ಗದಲ್ಲಿರುವ ಮೆಟ್ರೋ ಸೇವೆಗಳು ಬೈಯಪ್ಪನಹಳ್ಳಿಯಿಂದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ವರೆಗೆ ಮಾತ್ರ ಇರಲಿದೆ. ಮಾರ್ಚ್ 29 ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ಸೇವೆಗಳು ಎಂದಿನಂತೆ ನೇರಳೆ ಮಾರ್ಗದಲ್ಲಿ ಆರಂಭಗೊಳ್ಳಲಿದೆ.
ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಗಳಲ್ಲಿ ಈ ದಿನಾಂಕದಂದು ಯಾವುದೇ ಬದಲಾವಣೆ ಇರುವುದಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ