ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರನ್ನು ಎಸ್ಐಟಿಯವರು ವಿಚಾರಣೆ ಮಾಡಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಒತ್ತಾಯಿಸಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಷ, ಸಿಡಿ ಜಾಲವನ್ನು ಅಲ್ಲಿ ಇಲ್ಲಿ ಹುಡುಕಾಡುವ ಬದಲಾಗಿ ಕುಮಾರಸ್ವಾಮಿಯವರೇ ಹೇಳಿದ್ದಾರಲ್ಲ, ನನಗೆ ಐದು ಕೋಟಿ ಡೀಲ್ ಮಾಡಿರೋದು ಗೊತ್ತಿದೆ ಅಂತ. ಆ ಮಹಾನಾಯಕ ಯಾರೆಂದು ಗೊತ್ತಿದೆ ಅಂತ ಅವರೇ ಹೇಳಿದ್ಮೇಲೆ ಎಸ್ ಐಟಿಯವರು ಕುಮಾರಸ್ವಾಮಿ ಹೇಳಿಕೆ ತೆಗೆದುಕೊಳ್ಳಬೇಕು. ತನಿಖೆಗೆ ಸಹಕಾರ ಕೊಟ್ರು ಅನ್ನುವ ಕೀರ್ತಿ ಕುಮಾರಸ್ವಾಮಿಗೆ ಸಿಗುತ್ತೆ ಎಂದರು.
ವಿಜಯೇಂದ್ರ ಮಾಹಾ ನಾಯಕ :
ಸಿಎಂ ಪುತ್ರ ವಿಜಯೇಂದ್ರರರೇ ಆ ಮಹಾನಾಯಕ. ರಾಜ್ಯದಲ್ಲಿ ಸಿಎಂ ಹೊರತುಪಡಿಸಿದರೆ ಮಹಾನಾಯಕ ಯಾರು..? ಸಿಎಂ ಪುತ್ರ ವಿಜಯೇಂದ್ರರೇ ಆ ಮಹಾನಾಯಕ ಇರಬಹುದು ಎಂದು ಭವಿಷ್ಯ ಹೇಳಿದರು.
ಸಿಡಿ ಅಪ್ ಲೋಡ್ ಆಗುವ ಎರಡು ದಿನ ಮುಂಚೆ ಮಹಾರಾಷ್ಟ್ರ ಮಾಜಿ ಸಿಎಂ ಫಡ್ನವಿಸ್ ಅವರು ಜಾರಕಿಹೊಳಿಗೆ ಫೋನ್ ಮಾಡಿ ತಿಳಿಸಿದರು. ನಾಳೆ ನಾಡಿದ್ದು ಸಿಡಿ ಅಪ್ಲೋಡ್ ಆಗುತ್ತೆ ಅಂತ ಫೋನ್ ಮಾಡಿ ತಿಳಿಸಿದ್ದಾರೆ. ಹಿಂಗೆಲ್ಲಾ ಸಿಡಿ ಅಪ್ಲೋಡ್ ಮಾಡ್ತಾರೆ ಬೇಜಾರ್ ಮಾಡ್ಕೋಬೇಡ ನಿಮ್ಮ ಜೊತೆ ನಾವೆಲ್ಲಾ ಇರ್ತಿವಿ ಬೇಜಾರ್ ಮಾಡ್ಕೋಬೇಡ ಅಂತ ಫಡ್ನವೀಸ್ ಹೇಳಿದ್ದಾರೆ. ನನಗೆ ಒಂದು ಆಶ್ಚರ್ಯ ಅಂದ್ರೆ ಮಹಾರಾಷ್ಟ್ರದ ಮಾಜಿ ಸಿಎಂಗೆ ಮಾಹಿತಿ ಇರುತ್ತೆ. ನಮ್ಮಲ್ಲಿರುವ ಇಂಟೆಲಿಜೆನ್ಸ್ ಕತ್ತೆ ಕಾಯ್ತಾರಾ? ಎಂದು ರಾಜಣ್ಣ ಕಿಡಿಕಾರಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ