ನೀರಿನ ಪೈಪಿಗೆ ಹಾವುಗಳು ಸಿಕ್ಜು ಸಾವನ್ನಪ್ಪಿದ್ದರೂ ಅದೇ ಪೈಪಿನಿಂದ ಕುಡಿಯೋಕೆ ನೀರನ್ನ ಪೂರೈಸುವ ಗ್ರಾಮ ಪಂಚಾಯ್ತಿ ವಿರುದ್ಧ ಸ್ಥಳಿಯರು ಆಕ್ರೋಶ ಹೊರ ಹಾಕಿರುವ ಘಟನೆ ಜರುಗಿದೆ.
ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೋನುಗೂಡು ಗ್ರಾಮಕ್ಕೆ ಈ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ.
ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಹಳ್ಳಕ್ಕೆ ಮೋಟಾರ್ ಹಾಕಿದ್ದಾರೆ. ಆಗಾಗ್ಗೆ ಹಾವುಗಳು ಮೋಟರ್ ನ ಕೆಲ ಭಾಗಗಳಿಗೆ ಸಿಲುಕಿ ಸಾವನ್ನಪ್ಪುತ್ತಿವೆ. ಇಂತಹ ನೀರನ್ನು ಕುಡಿದು ಊರಿನ ಜನ ನಾನಾ ರೀತಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬುದು ಸಾರ್ವಜನಿಕರ ದೂರು.
ಹಳ್ಳವನ್ನು ಸ್ವಚ್ಛ ಮಾಡಿ ಇದಕ್ಕೆ ಶಾಶ್ವತ ಪರಿಹಾರ ಮಾಡಿ ಎಂದು ಪಂಚಾಯ್ತಿ ಗಮನಕ್ಕೆ ತಂದರೂ ಅಧಿಕಾರಿಗಳು ಹಾಗೂ ಸದಸ್ಯರು ಯಾವುದೇ ಕ್ರಮ ಕೈಗೊಳ್ಳದೆ ಕುಡಿಯಲು ಅದೇ ನೀರನ್ನ ಪೂರೈಸುತ್ತಿದ್ದಾರೆಂದು ಸ್ಥಳೀಯರು ಹಾಗೂ ಪಂಚಾಯ್ತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ