January 29, 2026

Newsnap Kannada

The World at your finger tips!

lorry

ಬಸ್, ಲಾರಿ ಮುಖಾಮುಖಿ ಢಿಕ್ಕಿ – ಚಾಲಕ ಸಜೀವ ದಹನ

Spread the love

ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಲಾರಿ ಚಾಲಕ ಸಜೀವ ದಹನವಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಕಳೆದ ರಾತ್ರಿ ಜರುಗಿದೆ.

ಮಂಗಳೂರಿನಿಂದ- ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್‍ಗೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.

ಈ ಘಟನೆ ವೇಳೆ ಎರಡು ಗಾಡಿಗಳ ಮಧ್ಯೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಲಾರಿ ಚಾಲಕ ಸಜೀವ ದಹನವಾಗಿದ್ದಾರೆ.

ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ತಕ್ಷಣ ಬಸ್‍ನಿಂದ ಕೆಳಗಿಳಿದು ಓಡಿ ಹೋಗಿ ಅಪಾಯದಿಂದ ಪಾರಾಗಿದ್ದಾರೆ.

ಬಸ್ ಹಾಗೂ ಲಾರಿ ಎರಡು ಸುಟ್ಟು ಭಸ್ಮವಾಗಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

error: Content is protected !!