ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 500 ಕೋಟಿ ಅಕ್ರಮ ವ್ಯವಹಾರ ನಡೆದಿದೆ. ಈ ವ್ಯವಹಾರದಲ್ಲಿ ನೇರ ಪಾತ್ರವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಜಾರಿ ನಿರ್ದೇಶನಾಲಯ ಕ್ಕೆ ದೂರು ನೀಡಲಾಗಿದೆ.
ಬೆಂಗಳೂರಿನ ಬನಶಂಕರಿ ನಿವಾಸಿ ಶ್ರೀಧರ್ ಮೂರ್ತಿ ಎಂಬುವವರು ಡಿಕೆ ಶಿವಕುಮಾರ್, ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ, ಶಂಕಿತ ಮಾಜಿ ಪತ್ರಕರ್ತ ನರೇಶ್ ಗೌಡ ಸೇರಿ ಐವರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.
ಹನಿಟ್ರ್ಯಾಪ್ ಹಾಗೂ ಒಳಸಂಚಿಗೆ ಸುಮಾರು 500 ಕೋಟಿ ರೂ. ಅಕ್ರಮ ವ್ಯವಹಾರ ನಡೆದಿದೆ, ಇಸಿಐಆರ್ ದಾಖಲಿಸಿಕೊಂಡು ತನಿಖೆ ಮಾಡಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ನೀಡಿರುವ ದೂರು ಆಧರಿಸಿ ತನಿಖೆ ನಡೆಸಬೇಕು. ಸಿಡಿ ಪ್ರಕರಣದಲ್ಲಿ ಜಾರಕಿಹೊಳಿಯನ್ನು ಸಿಲುಕಿಸಲು ಹನಿಟ್ರ್ಯಾಪ್ ಮಾಡಲಾಗಿದೆ. ಇದಕ್ಕಾಗಿ ಸುಮಾರು 500 ಕೋಟಿ ರು. ಖರ್ಚು ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಇಸಿಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ದೆಹಲಿಯ ಇಡಿ ನಿರ್ದೇಶಕ ಹಾಗೂ ಬೆಂಗಳೂರಿನ ಜಂಟಿ ನಿರ್ದೇಶಕರಿಗೆ ಶ್ರೀಧರ್ ಮೂರ್ತಿ ದೂರು ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ