ರಮೇಶ್ ಜಾರಕಿಹೊಳಿ ಬೆಂಬಲಕ್ಕೆ ನಿಂತ ಕಾಳೀ ಸ್ವಾಮೀಜಿಗೆ ಜೀವ ಬೆದರಿಕೆ

Team Newsnap
1 Min Read

ರಾಸಲೀಲೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಕ್ಕೆ ‌ನಿಂತಿರುವ ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿಗೆ ಜೀವ ಬೆದರಿಕೆ ಕರೆ ಬಂದಿದೆ

ಈ ಕಾರಣಕ್ಕಾಗಿ ಕಾಳೀ ಸ್ವಾಮೀಜಿ ಮಂಗಳವಾರ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಬಳಿ ರಕ್ಷಣೆ ಕೋರಿದ್ದಾರೆ.

ಕಾಳಿಕಾ ಮಠದ ಋಷಿಕುಮಾರ ಸ್ವಾಮೀಜಿಗೆ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ‘ ನೀನು ರಮೇಶ್ ಜಾರಕಿಹೊಳಿ ಪರ ಮಾತನಾಡುತ್ತಿದ್ದೀಯ..ಬರುವ ಅಮವಾಸ್ಯೆಗೆ ನಿನ್ನನ್ನು ಮುಗಿಸುತ್ತೇನೆ ಎಂದು ಅಪರಿಚಿತ ಬೆದರಿಕೆ ಕರೆ ಬಂದಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.

ಈ ಬೆದರಿಕೆ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ನೀಡುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಬಳಿ ಸ್ವಾಮೀಜಿ ರಕ್ಷಣೆ ಕೋರಿದ್ದಾರೆ.

Share This Article
Leave a comment