ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತ್ ಹಾಗೂ ಇನ್ಸ್ಪೆಕ್ಟರ್ ಮಾರುತಿ ಖಾಸಗಿ ದೂರು ದಾಖಲಾಗಿದೆ.
ಆದರ್ಶ್ ಆರ್. ಅಯ್ಯರ್ ಎಂಬುವವರು ಈ ಖಾಸಗಿ ದೂರು ನೀಡಿ, ಸಿಡಿ ಪ್ರಕರಣದಲ್ಲಿ ನಿರ್ಭಯ ಅಡಿಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂದು ದೂರು ನೀಡಿದ್ದಾರೆ.
ದಿನೇಶ್ ಕಲ್ಲಹಳ್ಳಿ ದೂರು ಆಧರಿಸಿ ಎಫ್ಐಆರ್ ದಾಖಲಿಸದ ಹಿನ್ನೆಲೆ ಈ ಖಾಸಗಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. 156(3) ಅಡಿಯಲ್ಲಿ ಈ ಖಾಸಗಿ ದೂರನ್ನು 8 ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆಂಬ ಗೊತ್ತಾಗಿದೆ.