ಬೆಂಗಳೂರಿನಲ್ಲಿ ಹೃದಯಾಘಾತ ದಿಂದ ಹಿರಿಯ ನಾಗರೀಕನ ಸಾವು

Team Newsnap
0 Min Read

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಹಿರಿಯ ನಾಗರೀಕ ಅಂಗವಿಕಲ ವ್ಯಕ್ತಿ ಚನ್ನಪ್ಪ (77) ಮೃತರು.

ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಬಿಎಂಟಿಸಿ-ಕೆಎಸ್​ಆರ್​​ಟಿಸಿ ಬಸ್​ಗಳು ರಸ್ತೆಗಿಳಿದಿಲ್ಲ. ಸರ್ಕಾರ ಖಾಸಗಿ ಬಸ್​ಗಳ ವ್ಯವಸ್ಥೆ ಮಾಡಿದೆ.

ಜಿಗಣಿಯಿಂದ ಬಂದಿದ್ದ ಚನ್ನಪ್ಪ ಮೆಜೆಸ್ಟಿಕ್​ನಲ್ಲಿ ಟೀ ಕುಡಿದು ಕೆಲವೇ ಕ್ಷಣಗಳಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.

 ಆನೇಕಲ್ ಚಿಕ್ಕನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಮೃತದೇಹವನ್ನು ಆ್ಯಂಬುಲೆನ್ಸ್ ಮೂಲಕ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 ಕೋವಿಡ್ ಟೆಸ್ಟ್ ಬಳಿಕ ಸಂಬಂಧಿಕರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ.

Share This Article
Leave a comment