ಮಂಡ್ಯ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಪುತ್ರಿಯ ಪ್ರಿಯಕರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಮಂಡ್ಯ ಕಲ್ಲಹಳ್ಳಿ ಬಡಾವಣೆಯಲ್ಲಿ ಜರುಗಿದೆ.
ಕಲ್ಲಹಳ್ಳಿಯ ದರ್ಶನ್ (17) ಮೃತ ಯುವಕ. ಅದೇ ಬಡಾವಣೆಯಲ್ಲಿದ್ದ ಸ್ಥಾಯಿ ಸಮಿತಿಯ ಅಧ್ಯಕ್ಷ ಶಿವಲಿಂಗು ಅವರ ಪುತ್ರಿಯನ್ನು ಆ ಯುವಕ ಪ್ರೀತಿಸುತ್ತಿದ್ದನು. ತಾನು ಪ್ರೀತಿಸುತ್ತಿದ್ದ ದರ್ಶನ್ ಮರೆಯುವಂತೆ ಪೋಷಕರು ಪದೇ ಪದೇ ಹೇಳುತ್ತಿದ್ದರೂ ಪ್ರೀತಿ ಯನ್ಮು ನಿಲ್ಲಿಸಿರಲಿಲ್ಲ.
ಇದರಿಂದ ಕುಪಿತಗೊಂಡ ಶಿವಲಿಂಗು ಆತನ ಹುಡುಗರು, ನಿನ್ನೆ ದರ್ಶನ್ ನನ್ನು ಮನೆಗೆ ಎಳೆದೊಯ್ದು ಹಲ್ಲೆ ನಡೆಸಿದ್ದರು.
ಈ ಘಟನೆಯಲ್ಲಿ ಗಾಯಗಳು ದರ್ಶನ್ ನನ್ನು ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದನು.
ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಕಲ್ಲಹಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ:
ಈ ಘಟನೆಯ ನಂತರ ಕಲ್ಲಹಳ್ಳಿ ಯಲ್ಲಿ ಪ್ರಕ್ಷುಬ್ಧವಾಗಿದೆ. ಬಿಗಿಯಾದ ಪೋಲಿಸ್ ಬಂದೋಬಸ್ಸು ಹಾಕಲಾಗಿದೆ.
ತಂದೆಯ ಬಂಧನ – ಎಸ್ ಐ ವಶಕ್ಕೆ :

ಯವಕನ ಹತ್ಯೆ ಪ್ರಕರಣಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಯುವತಿ ತಂದೆ , ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗ ಹಾಗೂ ರಿಸರ್ವ್ ಸಬ್ ಇನ್ಸ್ ಪೆಕ್ಟರ್ ಕುಮಾರ್ ಬಂಧಿಸಲಾಗಿದೆ.
ನಿನ್ನೆ ಮೃತ ದರ್ಶನ್ ಗೆ ಹಲ್ಲೆ ಮಾಡುವ ವೇಳೆ ಕುಮಾರ್ ಜೊತೆಯಲ್ಲಿದ್ದರು ಎಂಬ ಆರೋಪವಿದೆ.
ಕರ್ತವ್ಯ ನಿರತ ರಿಸರ್ವ್ ಸಬ್ ಇನ್ಸ್ ಪೆಕ್ಟರ್ ನ ವಶಕ್ಕೆ ಪಡೆದ ಪೊಲೀಸರು. ವಿಚಾರಣೆ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ