ಮಂಡ್ಯ ಜಿಲ್ಲೆಯ ಗಂಜಾಂ ಮೂಲ ನಿವಾಸಿ, ಶತಾಯುಷಿ, ನಿಘಂಟು ತಜ್ಞ, ಕನ್ನಡದ ರತ್ನ ಪ್ರೊ. ಜಿ ವೆಂಕಟಸುಬ್ಬಯ್ಯ ಬಾನುವಾರ ಮದ್ಯರಾತ್ರಿ ನಂತರ ಕೊನೆಯುಸಿರೆಳೆದರು
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, 77 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ,
ಪದ್ಮಶ್ರೀ ಪ್ರೊ. ವೆಂಕಟಸುಬ್ಬಯ್ಯ(108) ಮಧ್ಯರಾತ್ರಿ 1.30ರ ಸುಮಾರಿಗೆ ಇಹ ಲೋಕ ತ್ಯಜಿಸಿದರು.
1913 ಆಗಸ್ಟ್ 23 ರಂದು ಮೈಸೂರಿನಲ್ಲಿ ಜನಿಸಿದ ಇವರು, ಪದ್ಮಶ್ರೀ, ನಾಡೋಜ, ಪಂಪ ಪ್ರಶಸ್ತಿ, ಭಾಷಾ ಸಮ್ಮಾನ್ ಪುರಸ್ಕೃತರಾಗಿದ್ದರು. ಕನ್ನಡದ ಏಳಿಗೆಗಾಗಿ ದುಡಿದವರಾಗಿದ್ದು, ಭಾಷಾ ತಜ್ಞ, ಸಂಶೋಧಕ, ಬರಹಗಾರ, ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡದ ನಿಘಂಟು ಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ.
ಮೂತ್ರ ನಾಳದ ಸೋಂಕಿನಿಂದ ಬಳಲುತ್ತಿದ್ದ ಜಿ. ವೆಂಕಟಸುಬ್ಬಯ್ಯ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಎಂಟು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಮೂತ್ರ ನಾಳದ ಸೋಂಕಿನಿಂದ ಗುಣಮುಖರಾಗಿದ್ದ ಕಾರಣ ವೈದ್ಯರು ಇಂದು ಡಿಸ್ಚಾರ್ಜ್ ಮಾಡುವ ಮಾಹಿತಿ ನೀಡಿದ್ದರು. ಆದರೆ ತಡರಾತ್ರಿ ಮೃತಪಟ್ಟಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ