ಕೊರೋನಾ ಉಲ್ಬಣ: ನಿಖಿಲ್ ಕುಮಾರಸ್ವಾಮಿ ಅಪೋಲೊ ಗೆ ದಾಖಲು

Team Newsnap
0 Min Read

ಕೊರೊನಾ ಸೋಂಕಿನಿಂದ ಬಳಲುತ್ತಿರುವ ನಿಖಿಲ್ ಕುಮಾರಸ್ವಾಮಿಗೆ, ಜ್ವರ ಮತ್ತು ತಲೆನೋವು ತೀವ್ರವಾದ ಹಿನ್ನೆಲೆಯಲ್ಲಿ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್​ ಕುಮಾರ ಸ್ವಾಮಿ ಬೆಂಗಳೂರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಏ. 17 ರಂದು ನಿಖಿಲ್​ ಕುಮಾರಸ್ವಾಮಿಯವರಿಗೆ ಕೊರೊನಾ ಧೃಢವಾಗಿತ್ತು. ಹೋಂ ಐಸೋಲೇಶನ್​ ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಇಂದು ಮತ್ತೆ ಜ್ವರ ಮತ್ತು ತಲೆ ನೋವು ತೀವ್ರವಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಯವರು ದಾಖಲಾಗಿರುವ ಆಸ್ಪತ್ರೆಯಲ್ಲೇ ನಿಖಿಲ್​ ದಾಖಲಾಗಿದ್ದಾರೆ.

ಇನ್ನು ಅವರ ತಂದೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಗೆ ಕೂಡ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article
Leave a comment