ಕೊರೊನಾ ನಿಯಂತ್ರಣ ಹಿನ್ನೆಲೆ ಸೋಮವಾರ ನಡೆಯುತ್ತಿರುವ ಬೆಂಗಳೂರು ಜನಪ್ರತಿನಿಧಿಗಳ ಸಭೆಯಲ್ಲಿ ಲಾಕ್ಡೌನ್ ಬೇಡ ಎಂದು ನಿರ್ಧರಿಸಲಾಗಿದೆ .
ಬೆಂಗಳೂರಿನಲ್ಲಿ ಲಾಕ್ಡೌನ್ ಮಾಡುವ ಬದಲಿಗೆ 144 ಸೆಕ್ಷನ್ ಜಾರಿ ಮಾಡುವಂತೆ ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ, ಶಾಸಕ ರಾಮಲಿಂಗಾರೆಡ್ಡಿ ನೈಟ್ ಕರ್ಫ್ಯೂವಿಗೆ ವಿರೋಧ ವ್ಯಕ್ತಪಡಿಸಿದರು.
ನೈಟ್ ಕರ್ಫ್ಯೂವಿನಿಂದ ಕೊರೊನಾ ಹೋಗಲ್ಲ. ಕೊರೊನಾ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ. ಕಳೆದ ಬಾರಿ ಪುಡ್ ಕಿಟ್ ಕೊಟ್ಟಾಗ ಬಿಜೆಪಿ ಕ್ಷೇತ್ರದಲ್ಲೇ ಹೆಚ್ಚಾಗಿ ಕೊಟ್ಟಿದ್ದೀರಾ. ಇದೆಲ್ಲಾ ಮಾಡೋದು ಸರಿನಾ? ಎಂದು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.