ದೇಶದಲ್ಲಿ ಕೊರೊನಾ ವೈರಸ್ 1 ನೇ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರಿಂದ ಮಾನಸಿಕ ಸ್ಥೈರ್ಯ, ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು
ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಸೋಂಕು ಧೈರ್ಯದ ಪರೀಕ್ಷೆ ಮಾಡುತ್ತಿದೆ. ಜನರು ತಮ್ಮವರನ್ನು ಕಳೆದುಕೊಳ್ಳುತ್ತಿದ್ದಾರೆ. ದೇಶದಲ್ಲಿ 1 ನೇ ಅಲೆಯನ್ನು ನಿಭಾಯಿಸದ್ದೇವೆ, ಹೀಗಾಗಿ ಮಾನಸಿಕ ಸ್ಥೈರ್ಯ, ಆತ್ಮವಿಶ್ವಾಸ ಹೆಚ್ಚಿಸಿದೆ ಎಂದರು.
ಕೊರೊನಾ ಲಸಿಕೆ ಕುರಿತಂತೆ ಊಹಾಪೋಹಗಳನ್ನು ನಂಬಬೇಡಿ, ವಿಶ್ವಾಸಾರ್ಹ ಸುದ್ದಿಗಳನ್ನು ಮಾತ್ರ ನಂಬಿ. ಎಲ್ಲರಿಗೂ ಲಸಿಕೆ ಮಹತ್ವದ ಬಗ್ಗೆ ತಿಳಿಯುತ್ತಿದೆ. ಉಚಿತ ಲಸಿಕೆ ಕಾರ್ಯಕ್ರಮ ಜಾರಿಗೆ ಬರಲಿದೆ. ರಾಜ್ಯಗಳು ಲಸಿಕೆ ಸೌಲಭ್ಯ ಜನರಿಗೆ ತಲುಪಿಸಲಿ. 45 ವರ್ಷ ಮೇಲ್ಪಟ್ಟವರಿಗೆ ಕೇಂದ್ರದ ಉಚಿತ ಲಸಿಕೆ ಯೋಜನೆ ಮುಂದುವರಿಯಲಿದೆ. ಮೇ. 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತೆ. ಲಸಿಕೆಯ ಮಹತ್ವದ ತಜ್ಞರ ಸಲಹೆಗಳನ್ನು ಪಾಲಿಸಬೇಕು ಎಂದರು.
ದೇಶವು ಎರಡನೇ ಅಲೆಯಿಂದ ಕೊಚ್ಚಿಹೋಗಿರುವ ಸಮಯದಲ್ಲಿ, ಈ ಕಷ್ಟದ ಸಮಯಗಳನ್ನು ಎದುರಿಸಲು ಸಕಾರಾತ್ಮಕ ಮನೋಭಾವವು ಬಹಳ ಮುಖ್ಯವಾಗಿದೆ. ಭಾರತ ಸರ್ಕಾರದ ಉಚಿತ ಲಸಿಕೆ ಕಾರ್ಯಕ್ರಮ ವು ಭವಿಷ್ಯದಲ್ಲಿಯೂ ಮುಂದುವರಿಯುತ್ತದೆ. ಈ ಉಚಿತ ಲಸಿಕೆ ಕಾರ್ಯಕ್ರಮದ ಪ್ರಯೋಜನಗಳು ಸಾಧ್ಯವಾದಷ್ಟು ಜನರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ನಾನು ರಾಜ್ಯಗಳನ್ನು ವಿನಂತಿಸುತ್ತೇನೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ