ಏಪ್ರಿಲ್ 28 ರಿಂದ ಪ್ರಾರಂಭ ವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಕುರಿತಂತೆ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿ, ಹೆಚ್ಚುತ್ತಿರುವ ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು ಮತ್ತು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ.ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ.
ಕೊರೊನಾ 2ನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿರುವ ಕಾರಣ ಅನೇಕ ಪರೀಕ್ಷೆಗಳನ್ನು ಕೇಂದ್ರ ಸರ್ಕಾರವೇ ಮುಂದೂಡಿದೆ. ಆದರೆ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಯಲಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ