ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದ ಸಲಹೆಯಿಂದ ಪ್ರೇರಣೆಗೊಂಡು ರಾಯಚೂರಿನ ಶಿಕ್ಷಕರೊಬ್ಬರು ಮೂಗಿನಲ್ಲಿ ನಿಂಬೆ ಹಣ್ಣಿನ ಮೂರು- ಮೂರು ಹನಿ ರಸ ಹಾಕಿಕೊಂಡ ಕೊರೊನಾ ವೈರಸ್ ವಕ್ಕರಿಸೋಲ್ಲ ಎಂದು ಭಾವಿಸಿ ಕೊನೆಗೆ ಆರೋಗ್ಯದಲ್ಲಿ ಏರುಪೇರಾಗಿ ಬುಧವಾರ ಮೃತಪಟ್ಟಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ನಟರಾಜ ಕಾಲನಿಯಲ್ಲಿ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ (43) ಮೃತ ಪಟ್ಟವರು.
ಆರೋಗ್ಯವಾಗಿಯೇ ಇದ್ದ ವರ್ಷದ ಬಸವರಾಜ, ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂಚೂರು ಆತಂಕಗೊಂಡಿದ್ದರು. ಮೂಗಿಗೆ ನಿಂಬೆ ರಸ ಹಾಕಿಕೊಂಡ್ರೆ ಕೊರೊನಾ ಬರುವುದಿಲ್ಲ ಅಂತಾ ಭಾವಿಸಿ, ಬೆಳಗ್ಗೆ ಮೂಗಿಗೆ ನಿಂಬೆರಸ ಹಾಕಿಕೊಂಡ ನಂತರ ಒದ್ದಾಡಿ ಮೃತಪಟ್ಟಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ