ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೋ.ವೆಂ.ರಾಮಕೃಷ್ಣೇಗೌಡರು ಕೋವಿಡ್ ಗೆ ಬಲಿಯಾಗಿದ್ದಾರೆ.
ಮನೆಯವರಿಗೆಲ್ಲಾ ಕೋವಿಡ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದರು. ಆದರೆ ಗೌಡರು ಮಾತ್ರ ಚೇತರಿಸಿಕೊಳ್ಳಲು ಆಗಲಿಲ್ಲ.
ಕನ್ನಡ ಚಳವಳಿ, ಸಾಹಿತ್ಯ, ಸಂಸ್ಕೃತಿಯ ಪರಿಚಾರಕರು ಕೋ.ವೆಂ. ಸದಾ ಕ್ರಿಯಾಶೀಲರಾಗಿದ್ದರು. ಅಲ್ಲದೇ
ಬೆಂಗಳೂರು ನಗರ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದರು.