ಹಿರಿಯ ನಿರ್ದೇಶಕ ರೇಣುಕಾ ಶರ್ಮ ಕೋವಿಡ್ ಗೆ ಬಲಿ

Team Newsnap
1 Min Read

ಡಾ. ರಾಜ್ ಕುಮಾರ್ ಅಮೋಘ ನಟನೆ ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮ ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೋವಿಡ್ ಪಾಸಿಟಿವ್ ನಿಂದಾಗಿ ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ನಿರ್ದೇಶಕ ರೇಣುಕಾ ಶರ್ಮ ಅನಂತ ನಾಗ್ – ಮಾಧವಿ ಅಭಿನಯದ ಅನುಪಮ ಚಿತ್ರ ನಿರ್ದೇಶನ ಮಾಡುವುದರ ಮೂಲಕ ಚಿತ್ರ ರಂಗಕ್ಕೆ ಪಾದಾರ್ಪಣೆ ಮಾಡಿದರು.
ಐತಿಹಾಸಿಕ ಹಾಗೂ ಭಕ್ತಿ ಪ್ರಧಾನ ಚಿತ್ರ ಗಳನ್ನು ಅರ್ಥಪೂರ್ಣವಾಗಿ ತೆರೆಗೆ ಅರ್ಪಿಸುವಲ್ಲಿ ನಿರ್ದೇಶಕ ರೇಣುಕಾ ಶರ್ಮ ಎತ್ತಿದ ಕೈ.‌ ರಾಜ್ ಕುಮಾರ್ ಅಭಿನಯದ ಕವಿರತ್ನ ಕಾಳಿದಾಸ ಅತ್ಯಂತ ಯಶಸ್ವಿ ಚಿತ್ರವಾಗಿತ್ತು.

ನಮ್ಮೂರ ದೇವತೆ, ಶಹಬ್ಬಾಸ್ ವಿಕ್ರಮ್, ಅಂಜದ ಗಂಡು, ಶಬರಿಮಲೈ ಅಯ್ಯಪ್ಪ, ಶ್ರೀ ಅಯ್ಯಪ್ಪ, ಬರ್ಜರಿ ಗಂಡ, ಕಿಂದರಿ ಜೋಗಿ, ಕೊಲ್ಲಾಪುರ ಶ್ರೀ ಮೂಕಾಂಬಿಕೆ, ಮಹಾಸಾದ್ವಿ ಮಲ್ಲಮ್ಮ, ಚಿತ್ರವೂ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.

Share This Article
Leave a comment