ಚಾಮರಾಜನಗರ ಜಿಲ್ಲಾ ಆಸ್ಪತ್ರೆ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಡಿಸಿ ಎಂ ಆರ್ ರವಿ ತಪ್ಪಿತಸ್ಥರು ಹಾಗೂ ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾ. ಎ ಎನ್ ವೇಣುಗೋಪಾಲ್ ಗೌಡ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿಯು ರಾಜ್ಯ ಹೈಕೋರ್ಟ್ ಗೆ ಸಲ್ಲಿಸಿದ ವಿಚಾರಣಾ ವರದಿಯಲ್ಲಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ನೀಡಿದೆ.

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಮೇ2 ರಿಂದ ಮೇ 3 ಮಧ್ಯರಾತ್ರಿವರೆಗೆ
24 ಜನರ ಸಾವನ್ನಪ್ಪಿದ ಪ್ರಕರಣಕ್ಕೆ ಆಕ್ಸಿಜನ್ ಕೊರತೆ ಕಾರಣ. ಅಲ್ಲದೇ ಚಾಮರಾಜನಗರ ಡಿಸಿ ನಿರ್ಲಕ್ಷ್ಯ ದಿಂದ ಈ ದುರಂತ ಸಂಭವಿಸಿದೆ. ಮೈಸೂರು ಡಿಸಿ ರೋಹಿಣಿ ಸಿಂಧೂರಿ ಯಾವುದೇ ತಪ್ಪಿತಸ್ಥರಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.
ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ತುರ್ತು ವೇಳೆಯಲ್ಲಿ ಮೈಸೂರು ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡಲಿಲ್ಲ. ಮೇ 2 ರ ಸಂಜೆ ವೇಳೆಗೆ 100 ಆಕ್ಸಿಜನ್ ಸಿಲಿಂಡರ್ ಬೇಕಾಗಿತ್ತು. ಸಕಾಲದಲ್ಲಿ ಸರಬರಾಜು ಮಾಡುವುದನ್ನು ಡಿಸಿ ರೋಹಿಣಿ ತಡೆಹಿಡಿದರು ಎಂದು ಡಿಸಿ ಎಂ ಆರ್ ರವಿ ಮಾಡಿರುವ ಆರೋಪಕ್ಕೆ ಯಾವುದೇ ಪುರಾವೆ ಗಳಿಲ್ಲ ಎಂದು ವರದಿ ಹೇಳಿದೆ. ಅಲ್ಲದೇ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರುವಲ್ಲಿ ರವಿ ವಿಫಲರಾಗಿದ್ದಾರೆಂದು ದೂರಲಾಗಿದೆ.
ಈ ಪ್ರಕರಣದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸಮಿತಿ ಸೂಚಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ