February 24, 2026

Newsnap Kannada

The World at your finger tips!

lokesh karona

ಕೋವಿಡ್ ಪಾಸಿಟಿವ್ ಗೆ ಹೆದರಿದ ಶಿಕ್ಷಕ ನದಿಗೆ ಹಾರಿ ಆತ್ಮಹತ್ಯೆ

Spread the love

ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲಲ್ಲಿ ಶಿಕ್ಷಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಶಿಕ್ಷಕ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡವರು.

ಮೈಸೂರು ಜಿಲ್ಲೆಯ ಕೆ.ಆರ್ ನಗರದ ಕೋಗಿಲೂರು ಗ್ರಾಮದ ನಿವಾಸಿ.

ಕೊರೊನಾ ಪಾಸಿಟಿವ್ ದೃಢವಾಗುತ್ತಿದ್ದಂತೆಯೇ ಮೃತ ಲೋಕೇಶ್ ಗೆ ಕುಟುಂಬಸ್ಥರು ಆತ್ಮಸ್ಥೈರ್ಯ ತುಂಬಿದ್ದರು. ಅಲ್ಲದೆ ವಾರ್ ರೂಂನಿಂದ ಕರೆ ಮಾಡಿ ಆತಂಕ ಪಡೆದಂತೆ ತಿಳಿಸಿದ್ದರು. ಆದರೂ ಭಯದಿಂದ ಮನೆ ಬಿಟ್ಟು ಹೋಗಿ ಲೋಕೇಶ್ ಸಾವಿಗೆ ಶರಣಾಗಿದ್ದಾರೆ.

ಲೋಕೇಶ್ ಗೆ ಕಳೆದ ವರ್ಷವಷ್ಟೇ ಮದುವೆಯಾಗಿತ್ತು. ತನ್ನ ಪತ್ನಿ ಮನೆಗೆ ಹೋಗುವುದಾಗಿ ಹೇಳಿದ್ದ ಲೋಕೇಶ್, ಪತ್ನಿ ಮನೆ ಬಳಿ ಬೈಕ್ ನಿಲ್ಲಿಸಿ ಅಲ್ಲಿಯೇ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದರು.

ಎರಡು ದಿನದ ಬಳಿಕ ಹಾಸನ ಜಿಲ್ಲೆಯ ಅರಕಲಗೂಡಿನ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!