ತಿರುಪತಿ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯ ಬಳಿ ಎರಡು ಟ್ರಂಕ್ ನಲ್ಲಿ ಸಿಕ್ಕಿತು 10 ಲಕ್ಷ ರು.
ಕಳೆದ ವರ್ಷ ಬಿಕ್ಷುಕ ಶ್ರೀನಿವಾಸ್ ಅನಾರೋಗ್ಯದಿಂದ ಮೃತಪಟ್ಟಿದ್ದನು. ಹೀಗಾಗಿ ಆತನ ಕುಟುಂಬದ ಸದಸ್ಯರು ಯಾರೂ ಇಲ್ಲವೆಂಬುದನ್ನು ಅರಿತ ಟಿಟಿಡಿ ಅಧಿಕಾರಿಗಳು, ಆತನ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ 2 ಟ್ರಂಕ್ ಬಾಕ್ಸ್ ಪತ್ತೆಯಾಗಿದೆ. ಅವುಗಳನ್ನು ತೆರೆದು ನೋಡಿದಾಗ ಕಂತೆ ಕಂತೆ ನೋಟುಗಳು ಸಿಕ್ಕಿವೆ.
ಈ ನೋಟುಗಳನ್ನು ಎಣಿಸಿದಾಗ ಸುಮಾರು 10 ಲಕ್ಷ ರು. ಇರುವುದು ಗೊತ್ತಾಗಿದೆ. ಅಲ್ಲದೆ 1,000 ಮುಖಬೆಲೆಯ ರದ್ದಾದ ನೋಟುಗಳು ಕೂಡ ಇದ್ದವು. ಹಾಗೆಯೇ 2 ಸಾವಿರ ಮುಖಬೆಲೆಯ ನೋಟುಗಳು ಕೂಡ ಸಾಕಷ್ಟಿದ್ದವು. ಸದ್ಯ ಅಧಿಕಾರಿಗಳು ಹಣವನ್ನು ಮುಟ್ಟುಗೋಲು ಹಾಕಿ ಟಿಟಿಡಿ ಖಜಾನೆ ಸೇರಿಸಿದ್ದಾರೆ.
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ