ಹೆರಿಗೆ ನೋವು ಕಾಣಿಸಿಕೊಂಡಿದ್ದರೂ ಗರ್ಭಿಣಿಯನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಿಕೊಳ್ಳಲು ಮಂಡ್ಯ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ನಿರಾಕರಣೆ ಮಾಡಿದ್ದರಿಂದ ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ ಆಯ್ತು. ಆದರೆ ಮಗು ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ಜರುಗಿದೆ.
ಮಂಡ್ಯ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ಮುಂಭಾಗ ಮನಕಲಕುವ ಘಟನೆ ಜರುಗಿದೆ.
ನಿನ್ನೆ ಹೆರಿಗೆಗಾಗಿ ಸೋನು ಎಂಬ ತುಂಬು ಗರ್ಭಿಣಿ ಆಸ್ಪತ್ರೆಗೆ ಬಂದಿದ್ದರು. ಕೋವಿಡ್ ರಿಪೋರ್ಟ್ ಇಲ್ಲ ಎನ್ನುವ ಕಾರಣಕ್ಕೆ ಸೋನು ಅವರನ್ನು ನಿನ್ನೆ ಅಡ್ಮಿಟ್ ಮಾಡಿಕೊಂಡಿರಲಿಲ್ಲ.
ಬುಧವಾರ ಬೆಳಗ್ಗೆ 6 ಗಂಟೆಯಲ್ಲಿ ನೋವು ಮತ್ತೆ ಕಾಣಿಸಿಕೊಂಡಿದ್ದರಿಂದ ಪೋಷಕರು 8 ಗಂಟೆ ವೇಳಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಈ ವೇಳೆ 2 ಗಂಟೆಯಾದರೂ ಸೋನಳನ್ನು ದಾಖಲು ಮಾಡಿಕೊಳ್ಳದೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದರು. ಈ ವೇಳೆ ಆಸ್ಪತ್ರೆ ಮುಂಭಾಗ ನಿಂತಿದ್ದ ಮಹಿಳೆಗೆ ನಿಂತಲ್ಲೇ ಹೆರಿಗೆ ಆಗಿ, ಮಗು ಕೆಳಗೆಬಿದ್ದು ಮಗು ಸಾವನ್ನಪ್ಪಿತು.
ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ