ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ನೀಡಿ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದೆ ಎಂದು ಗೊತ್ತಾಗಿದೆ.
ಪ್ರಕರಣ ಸಂಬಂಧ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲವಂತೆ. ಹೀಗಾಗಿ ಬಿ ರಿಪೋರ್ಟ್ ಸಲ್ಲಿಸಿ ಪ್ರಕರಣಕ್ಕೆ ಫುಲ್ ಸ್ಟಾಪ್ ಹಾಕಲು ಎಸ್ ಐಟಿ ಮುಂದಾಗಿದೆ.
ಸಿಡಿ ತನಿಖೆ ಪೂರ್ಣಗೊಂಡಿದೆ. ಜಾರಕಿಹೊಳಿ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ. ಮಹಿಳೆಯೇ ಪದೇ ಪದೇ ಜಾರಕಿಹೊಳಿಯವರನ್ನು ಸಂಪರ್ಕಿಸಿದ್ದಾರೆ. ಸಾಕಷ್ಟು ಬಾರಿ ದೂರವಾಣಿ ಕರೆ ಮಾಡಿ ಪ್ರಚೋದನೆ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ. ಲಭ್ಯವಾಗಿರುವ ವಿಡಿಯೋದಲ್ಲಿ ಮಹಿಳೆಗೆ ಬಲವಂತ ಮಾಡಿರುವ, ದೌರ್ಜನ್ಯ ಎಸಗಿರುವ ಯಾವುದೇ ದೃಶ್ಯಗಳೂ ಕಂಡು ಬಂದಿಲ್ಲ. ಇಬ್ಬರ ಸಹಮತದಿಂದಲೇ ಕ್ರಿಯೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅನೇಕ ಬೆಳವಣಿಗೆ ಗಮನಿಸಿದರೆ ಜಾರಕಿಹೊಳಿಯವರು ಹನಿ ಟ್ರ್ಯಾಪ್’ಗೆ ಒಳಗಾಗಿದ್ದಾರೆಂದು ಹೇಳಲಾಗುತ್ತಿದ್ದು, ಈ ಸಂಬಂಧ ಎಸ್ಐಟಿ ಅಧಿಕಾರಿಗಳೂ ನ್ಯಾಯಾಲಯಕ್ಕೆ ಶೀಘ್ರದಲ್ಲಿಯೇ ಬಿ ರಿಪೋರ್ಟ್ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ