ಕೇಂದ್ರ ಸರ್ಕಾರ ಸಿಬಿಎಸ್ ಸಿ 12ನೇ ತರಗತಿ ಪರೀಕ್ಷೆಯನ್ನೇ ರದ್ದು ಮಾಡಿ ಆದೇಶ ಹೊರಡಿಸಿದೆ.
ದೇಶಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಹೇಳಿದೆ
ಸಿಬಿಎಸ್ ಸಿ 12ನೇ ತರಗತಿ ಪರೀಕ್ಷೆಗಳನ್ನು ನಡೆಸುವ ವಿಚಾರವಾಗಿ ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ವ್ಯಕ್ತವಾಗಿತ್ತು.

ಕೊರೊನಾ ಎರಡನೇ ಅಲೆಯ ಭಾರಿ ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಉಚಿತವಲ್ಲ ಎಂದು ಹಲವು ರಾಜ್ಯ ಸರ್ಕಾರಗಳು ಹಾಗೂ ವಿರೋಧ ಪಕ್ಷಗಳೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದವು.
ಮಂಗಳವಾರ ಸಂಜೆ ಪ್ರಧಾನಿ ಮಹತ್ವದ ಸಭೆ ನಡೆಸಿ ಉನ್ನತ ಅಧಿಕಾರಿಗಳೊಂದಿಗೆ ಪರೀಕ್ಷೆ ವಿಚಾರವಾಗಿ ಚರ್ಚೆ ನಡೆಸಿದರು.
ಸಭೆಯ ನಂತರ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನ ರದ್ದು ಮಾಡಿ ಆದೇಶ ಹೊರಡಿಸಿದೆ.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ