ರಾಜ್ಯ ಬಿಜೆಪಿ ಆಂತರಿಕ ಕಲಹ ಮತ್ತೆ ತಾರಕಕ್ಕೆ ಏರಿದೆ. ಮುಂದಿನ ಎರಡು ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ನಿನ್ನೆಯಷ್ಟೇ ಹೇಳಿಕೆ ನೀಡಿದ ಬೆನ್ನಲ್ಲೇ ಬಿಎಸ್ ವೈ ವಿರೋಧಿ ಬಣ ರಾತ್ರಿ ದೆಹಲಿಗೆ ದೌಡಾಯಿಸಿದೆ.
ಸಚಿವ ಸಿ ಪಿ ಯೋಗೇಶ್ವರ್ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಕಳೆದ ರಾತ್ರಿಯೇ ದೆಹಲಿಗೆ ತೆರಳಿದ್ದಾರೆ. ಇಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ತಮ್ಮ ಅತೃಪ್ತಿ, ಅಸಮಾಧಾನ ಹೊರ ಹಾಕುವ ಸಾಧ್ಯತೆ ಇದೆ.
ಕಳೆದ ಬಾರಿಯೂ ಸಿಪಿವೈ ಜೊತೆ ಬೆಲ್ಲದ್ ದೆಹಲಿಗೆ ಹೋಗಿದ್ದರು. ಈಗ ಮತ್ತೆ ಇಬ್ಬರೂ ಜಂಟಿಯಾಗಿ ವಿರೋಧಿ ಕಾರ್ಯಾಚರಣೆ ಆರಂಭಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಆಂತರಿಕ ಕಲಹ ರಾಜಕೀಯ ಕ್ರಾಂತಿ ಮಾಡುವ ಸಾಧ್ಯತೆ ಇದೆ.
ಈ ನಡುವೆ ಜೂನ್ 17 ರಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಕ್ಕೆ ಭೇಟಿ ನೀಡುವ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ವಿರುದ್ಧ ಚಟುವಟಿಕೆಗಳು ಬಿರುಸುಗೊಂಡಿರುವುದರಿಂದ ಮತ್ತೆ ರಾಜ್ಯ ರಾಜಕಾರಣಕ್ಕೆ ರಂಗು ಬರಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ